ಕನ್ನಡಿಗರ ಸಂಪರ್ಕ ಜಾಲ

ಎಲ್ಲ ಕನ್ನಡ ಮನಸ್ಸುಗಳನ್ನ ಬೆಸೆಯುವ ಒಂದು ಕನ್ನಡಪರ ಪ್ರಗತಿಪರ ಮನಸ್ಸುಗಳ ಮಿಲನದ ಹೂರಣ

Latest Activity

vivek hegde updated their profile
10 minutes ago
vivek hegde, NAVEEN MALHOTRA, punith.prince007 and 18 more joined ಕನ್ನಡಿಗರ ಸಂಪರ್ಕ ಜಾಲ
11 minutes ago
JAGADEESH.B updated their profile
1 hour ago
7 hours ago
NUTHAN HB added a blog post
ಬೇರಿನಲ್ಲಿ ಬುತ್ತಿ ಕಟ್ಟಿಟ್ಟಿದ್ದಳು ಅಮ್ಮ ಮರಕೆಲ್ಲಿ ಗೊತ್ತು? ಎಲ್ಲಿಂದಲೋ ಬಂದ ರಿವಿಕಿರಣಕ್ಕೆ ಮುಖ ಮಾಡಿತ್ತು! ಮೈ ಎಲ್ಲ ಮನಮಾಡಿ ಹಸಿರುಗನಸುಗಳ ಹೊತ್ತು ಮಂದ ಮಾರುತಕ್ಕೆ ಮೈಯ್ಯ ಮರೆತಿತ್ತು! ಬಳುಕುವ ಬಳ್ಳಿಗೆ ಸೋತು ಅಪ್ಪಿ ಬೆಳೆದಿತ್ತು! ಬಣ್ನ ಬಣ್ನಗಳ ಹಕ್ಕಿಗಳ ಸಂಸಾರ ಮೈ ಎಲ್ಲ ಹೊತ್ತು ತಾನೋಬ್ಬ...
10 hours ago
10 hours ago
10 hours ago
roopagowda.k and venkatakrishna.kk are now friends
12 hours ago
12 hours ago
Website is being uploaded with information which is on file. Anyway visit the website.
14 hours ago
channaagide..
14 hours ago
15 hours ago
vasanth added a gift to their profile page
From the Gift Store
15 hours ago
KARUNA J and JAGADEESH.B are now friends
15 hours ago
16 hours ago
praveen added a blog post
ಭಾಷೆಯಲ್ಲಿ ಕನ್ನಡ ಚೆನ್ನ ಹೇಳಿದ್ದು ಹೀಗೆಂದು ಮಹಾಕವಿ ರನ್ನ ಕನ್ನಡ ಹುಟ್ಟಿದ್ದು ರನ್ನ ಪಂಪರ ಮುನ್ನ ರಕ್ಷಿಸುತಿಹುದು ಕರ್ನಾಟಕ ನಮ್ಮೆಲ್ಲರನ್ನ ನಿತ್ಯ ಸತ್ಯ ಎಂದು ಹೊಗಳುವರು ಕನ್ನಡವನ್ನ ಇದರ ಉಳಿವಿಗಾಗಿ ಯಾರು ಪಡುವುದಿಲ್ಲ ಕಷ್ಟವನ್ನ ಹೀಗೆ ಆದರೆ ಸದ್ಯದಲ್ಲೇ ತೆರಬೇಕಾಗುವುದು ನಷ್ಟವನ್ನ ಎಲ್ಲರೂ ದುಡಿ...
16 hours ago
thanks a lot
17 hours ago
tumbane channgi bardideeya manju, meaning full line, namma nambikene devru.
18 hours ago
tanushree is now friends with satish S H and Anand.T.Shetty
18 hours ago
18 hours ago

RSS

"ತಮಂಧದ ಕೇಡು"----ಲೇ: ಅಮರೇಶ ನುಗಡೋಣಿ

ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ನುಗಡೋಣಿಯಲ್ಲಿ ೧೯೬೦ರಲ್ಲಿ ಜನಿಸಿದ ಅಮರೇಶ ನುಗಡೋಣಿಯವರು ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ.
ದೇವನೂರು ಮಹಾದೇವರ ನಂತರದ ಲೇಖಕರಲ್ಲಿ ಶೋಷಣಾವ್ಯವಸ್ಥೆಯ ವಿವಿಧ ಮುಖಗಳನ್ನು ನುಗಡೋಣಿಯವರಷ್ಟು ಸಮರ್ಥವಾಗಿ ಚಿತ್ರಿಸಿದ ಲೇಖಕರು ಇನ್ನೊಬ್ಬರಿಲ್ಲ ಎಂದು ಹೇಳಬಹುದು.

ಊಳಿಗಮಾನ್ಯಸಂಸ್ಕೃತಿಯ ಮೂಲರೂಪ ಅರ್ಥಾತ್ classical model of feudal structure ಇದರ ಮುಖ್ಯ ಗುಣವೆಂದರೆ, ಶೋಷಿತನು ತನ್ನ ತನು ಹಾಗು ಮನವನ್ನಷ್ಟೇ ಅಲ್ಲ, ತನ್ನ ಆತ್ಮವನ್ನೂ ಸಹ ತನ್ನ ಯಜಮಾನನ ಊಳಿಗಕ್ಕೆ ಬೇಶರತ್ತಾಗಿ ಒಪ್ಪಿಸಿಬಿಟ್ಟಿರುತ್ತಾನೆ. ಇದಕ್ಕೆ ಪ್ರತಿಯಾಗಿ ಯಜಮಾನನು ದರ್ಪ, ದಬ್ಬಾಳಿಕೆ ಹಾಗು ಸರ್ವಸ್ವಾಮಿತ್ವವನ್ನು ಪ್ರದರ್ಶಿಸುತ್ತಾನೆ. ಇಂತಹ ತಮಂಧದ ಕೇಡಿನಿಂದ ಹೊರಬರಬೇಕಾದರೆ ಶಿಕ್ಷಣದ ಬೆಳಕು ಬೇಕು. ಆದರೆ ಈ ವ್ಯವಸ್ಥೆಯು ಅಂತಹ ಶಿಕ್ಷಿತ ಪ್ರತಿಭಟನಾಕಾರರನ್ನೂ ಸಹ ನಿರ್ದಾಕ್ಷಿಣ್ಯವಾಗಿ ಹೊಸಕಿ ಹಾಕಿ ಬಿಡುತ್ತದೆ.

ನುಗಡೋಣಿಯವರ "ತಮಂಧದ ಕೇಡು" ಎನ್ನುವ ಕತೆಯಲ್ಲಿ ದುರುಗ ಎನ್ನುವ ಜೀತದಾಳಿನ ದುಃಸ್ವಪ್ನದೊಂದಿಗೆ ಕತೆ ಪ್ರಾರಂಭವಾಗುತ್ತದೆ. ತನ್ನ ಒಡೆಯನಾದ ಶಾಂತಗೌಡನ ಜಮೀನಿನಲ್ಲಿರುವ ಎರಡು ದೊಡ್ಡ ಮರಗಳ ನಡುವೆ ಜೋಪಡಿ
ಹಾಕಿಕೊಂಡು, ದುರುಗ ತನ್ನ ಹೆಂಡತಿ ಚಂದವ್ವ ಹಾಗು ಜೋಳಿಗೆ ಕೂಸು ಚೆನ್ನಮಲ್ಲಪ್ಪನೊಂದಿಗೆ ಬದುಕು ಸಾಗಿಸುತ್ತಿದ್ದಾನೆ.
ಒಡೆಯನಿಗೆ ನಿಷ್ಠೆಯಿಂದ ದುಡಿಯುವದರಿಂದ ದುರುಗ ಶಾಂತಗೌಡನ ನೆಚ್ಚಿನ ಆಳಾಗಿದ್ದಾನೆ. ಶಾಂತಗೌಡ ‘ದುರುಗಾ’ ಎಂದು ಕೂಗಿದಾಗ, ದುರುಗನಿಗೆ ಇದು ಪುಣ್ಯದ ಕರೆಯಂತೆ ಕೇಳಿಸುವಷ್ಟು ಈತ ಶಾಂತಗೌಡನ ದಾಸನಾಗಿದ್ದಾನೆ.

ಇಂತಹ ದುರುಗನ ಚಂದದ ಹೆಂಡತಿ ಚಂದಮ್ಮನ ಮೇಲೆ ಶಾಂತಗೌಡನಿಗೆ ಮನಸ್ಸಾಗುತ್ತದೆ.


ಚಂದಮ್ಮ ತನ್ನ ದಣಿಗೆ ಪ್ರತಿಭಟನೆ ಇಲ್ಲದೆ ವಶವಾದಳು. ಆದರೆ ಈ ಕೆಂಡವನ್ನು ಮನದಲ್ಲಿಯೇ ಇಟ್ಟುಕೊಂಡಿರಲು ಅವಳಿಂದ ಸಾಧ್ಯವಾದೀತೆ? ಕೊನೆಗೊಮ್ಮೆ ತನ್ನ ಗಂಡ ದುರುಗನೆದುರಿಗೆ ಅವಳು ತನ್ನ ಸಂಕಟವನ್ನು ಬಿಚ್ಚಿಟ್ಟಳು. ದುರುಗನಾದರೋ ತನ್ನ ತನು, ಮನಗಳನ್ನು ತನ್ನ ದಣಿಗೆ ಒಪ್ಪಿಸಿಬಿಟ್ಟ ಊಳಿಗದಾಳು. ಆತ ಏನು ಮಾಡಿಯಾನು?

ತಪ್ಪು ಮಾಡಿದವನು ದಣಿ. ಆದರೆ ದುರುಗನೇ ಆತನ ಕಾಲಿಗೆ ಬಿದ್ದು ಅತ್ತು ಬಿಡುತ್ತಾನೆ! ತನ್ನ ಹೆಂಡತಿಯನ್ನು ಮರಳಿ ಕರೆ ತರುತ್ತಾನೆ. ಶಾಂತಗೌಡ ದಣಿಯ ಹಕ್ಕನ್ನು ದುರುಗನ ಹೆಂಡತಿಯ ಮೇಲೆ ಮರುಸ್ಥಾಪಿಸುತ್ತಾನೆ. ಇಷ್ಟಾದರೂ ದುರುಗ ಆ ಹಳ್ಳಿಯನ್ನು ಬಿಟ್ಟು, ತನ್ನ ದಣಿಯನ್ನು ಬಿಟ್ಟು ಬೇರೆಲ್ಲೂ ಹೋಗುವದಿಲ್ಲ! ಯಾಕೆಂದರೆ ಆತ ತನ್ನ ದಾಸ್ಯತ್ವವನ್ನು ಕಾಯಾ, ವಾಚಾ, ಮನಸಾ ಒಪ್ಪಿಕೊಂಡು ಬಿಟ್ಟಿದ್ದಾನೆ.
ಇತ್ತ ಚಂದಮ್ಮನೂ ಬಹಳ ದಿನ ಬದುಕುವದಿಲ್ಲ. ದುರುಗನ ಮಗ ಊರ ಮಗನಾಗಿ ಬೆಳೆದವನು ಹೆಚ್ಚಿನ ಕಲಿಕೆಗಾಗಿ ಶಹರಕ್ಕೆ ಹೋಗುತ್ತಾನೆ. ಯಜಮಾನ ಶಾಂತಗೌಡ ತನ್ನ ನೆಚ್ಚಿನ ಬಂಟನ ಮಗನ ಶಿಕ್ಷಣಕ್ಕೆ ಉದಾರವಾಗಿ ನೆರವು ನೀಡುತ್ತಾನೆ. ಚೆನ್ನಮಲ್ಲಪ್ಪ ಆ ಶಹರದ ಶಾಲೆಯಲ್ಲಿಯೇ ಶಿಕ್ಷಕನಾಗುತ್ತಾನೆ.

ಶಾಂತಗೌಡನ ಒಬ್ಬಳೇ ಸಂತಾನವಾದ ಅಕ್ಕಮಹಾದೇವಿ ಕಲಿಯಲೆಂದು ಶಹರದಲ್ಲಿಯೇ ಇದ್ದವಳು ಚೆನ್ನಮಲ್ಲಪ್ಪನಲ್ಲಿ ಅನುರಕ್ತಳಾಗುತ್ತಾಳೆ. ಈ ಆಘಾತಕಾರಿ ಸುದ್ದಿ ತನಗೆ ಬಂದು ಮುಟ್ಟಿದೊಡನೆಯೆ ದುರುಗ ನಿರ್ವಿಣ್ಣನಾಗಿ ತನ್ನ ಮಗನಿಗೆ ಬುದ್ಧಿ ಹೇಳುತ್ತಾನೆ. ಆ ಬುದ್ಧಿಮಾತಿನಲ್ಲೂ ಸಹ ಆತನ ದಾಸ್ಯಭಾವ ಹೇಗೆ ಮೇಲುಗೈಯಾಗಿದೆಯೆನ್ನುವದನ್ನು ನೋಡಿರಿ:



"ನನ್ಗ ಇಲ್ಲಿ ಬುಡಾದ ನಂಟದ" ಎಂದು ಹೇಳುವ ದುರುಗನಿಗೆ ಇರುವ ನಂಟು ಎಂತಹದು? ದುರುಗ ಇರುತ್ತಿದ್ದ ಮರಗಳ ನಡುವಿನ ಜೋಪಡಿ ಈಗಿಲ್ಲ. ಮರಮಟ್ಟುಗಳನ್ನು ಮಾಡಿಸಲು ಶಾಂತಗೌಡ ಆ ಮರಗಳನ್ನು ಕಡಿಸಿ ಹಾಕಿದ್ದಾನೆ. ದುರುಗನಿಗೆ ಹಾಗೂ ನೂರಾರು ಹಕ್ಕಿಗಳಿಗೆ ಆಸರೆಯಾಗಿದ್ದ ಆ ಮರಗಳು, ಯಜಮಾನಿಕೆಯ ಉಪಭೋಗಕ್ಕಾಗಿ ನಷ್ಟವಾಗಿವೆ. ದುರುಗ ಹಾಗು ಆ ಮರಗಳ ನಡುವೆ ಭಾವನಾತ್ಮಕ ಸಂಬಂಧವಿತ್ತು. ದುರುಗ ದೈನಾಸಪಡುತ್ತ ಆ ಮರಗಳನ್ನು ಉಳಿಸಲು ಶಾಂತಗೌಡನಿಗೆ ಬೇಡಿಕೊಳ್ಳುವದು ಹೀಗೆ:

ಇದಕ್ಕೆ ಪ್ರತಿಯಾಗಿ ಶಾಂತಗೌಡನಲ್ಲಿರುವದು ದರ್ಪ ಹಾಗು ಸಿಟ್ಟಿನ ಸ್ವಭಾವ. ಎಲ್ಲವೂ ತನಗಾಗಿಯೇ, ತನ್ನ ಉಪಭೋಗಕ್ಕಾಗಿಯೇ ಇರುವದು ಎನ್ನುವ ಅಹಂಭಾವ. (‘ಶಾಂತಗೌಡ’ ಎನ್ನುವ ಹೆಸರಿನ ಅಸಂಗತತೆಯನ್ನು ಗಮನಿಸಿರಿ.) ದುರುಗನ ಮೇಲಿನ ತನ್ನ ಸಿಟ್ಟನ್ನು ಆತ ಇತರ ಆಳುಗಳ ಮೇಲೆ ಹಾಗು ಜಾನುವಾರುಗಳ ಮೇಲೆ ತಿರುಗಿಸುವದರ ವರ್ಣನೆ ಹೀಗಿದೆ:


ಶಾಂತಗೌಡ ಹೊಳೆಯ ಈಚೆಯ ಹಳ್ಳಿಯಲ್ಲಿದ್ದರೆ, ಹೊಳೆಯ ಆಚೆಯ ಬದಿಯಲ್ಲಿ ಅವನ ಅಕ್ಕ ಇದ್ದಾಳೆ. ವಿಧವೆಯಾದ ಮೇಲೆ
ತಾನೇ ಜಮೀನುದಾರಿಕೆಯನ್ನು ಗೌಡತಿಯ ಎಲ್ಲಾ ಗತ್ತಿನೊಂದಿಗೆ ನಡೆಯಿಸಿಕೊಂಡು ಹೋಗುತ್ತಿದ್ದಾಳೆ. ಸೇತುವೆ ಇಲ್ಲಿ ಇಲ್ಲದ್ದರಿಂದ ದುರುಗನೇ ಶಾಂತಗೌಡನನ್ನು ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೊಳೆ ದಾಟಿಸುತ್ತಿದ್ದ.

ಶಾಂತಗೌಡನ ಮಗಳನ್ನು ತನ್ನ ಸೊಸೆಯನ್ನಾಗಿ ಮಾಡಿಕೊಂಡರೆ, ತಮ್ಮನ ಆಸ್ತಿ ಎಲ್ಲ ತನಗೇ ಬರುವದೆನ್ನುವ ಒಳ ಆಸೆ ಈ ಅಕ್ಕನಿಗಿದೆ. ಆದರೆ ಅಕ್ಕಮಹಾದೇವಿ ಊಳಿಗದ ಆಳಾದ ದುರುಗನ ಮಗ ಚೆನ್ನಮಲ್ಲಪ್ಪನಲ್ಲಿ ಅನುರಕ್ತಳಾಗಿದ್ದಾಳೆ. ಶಾಂತಗೌಡನು ದುರುಗನ ಹೆಗಲ ಮೇಲೆ ಸವಾರಿ ಮಾಡಿಕೊಂಡು, ಹೊಳೆ ದಾಟಿ ತನ್ನ ಅಕ್ಕನಿದ್ದಲ್ಲಿಗೆ ಬಂದು ಅವಳೊಡನೆ ಈ ಸಮಸ್ಯೆಯ ಬಗೆಗೆ ಆಪ್ತಾಲೋಚನೆ ಮಾಡುತ್ತಾನೆ.

ಯಜಮಾನಸಂಸ್ಕೃತಿಯ ಪಟ್ಟದಲ್ಲಿರುವ ವ್ಯಕ್ತಿಗೆ ತನ್ನ ಪಟ್ಟದ ಭದ್ರತೆಯೊಂದೇ ಮುಖ್ಯ. ಸ್ವಾರ್ಥಸಾಧನೆಯ ಕ್ರೌರ್ಯ ಈ ವ್ಯಕ್ತಿಯ ಅಂತರಾಳದಲ್ಲಿ ಲಿಂಗಭೇದವಿಲ್ಲದೇ ಹುದುಗಿರುತ್ತದೆ. ತನ್ನ ತಮ್ಮನಿಗೆ ಅವಳು ಕೊಡುವ ಸಲಹೆಯು ಅವಳ ತಮ್ಮನನ್ನೂ ಸಹ ಒಂದು ನಿಮಿಷ ನಡುಗಿಸಿ ಬಿಡುತ್ತದೆ:

ಶಾಂತಗೌಡ ಹಳ್ಳಿಗೆ ಮರಳುವಾಗ ಮತ್ತೆ ದುರುಗನ ಮೇಲೆ ಸವಾರಿ ಮಾಡಿ ಹೊಳೆ ದಾಟಬೇಕು. ಹೊಳೆ ದಾಟುವಾಗ ತನ್ನ ದಣಿಯನ್ನು ಹೊಳೆಯಲ್ಲಿ ಮುಳುಗಿಸಿಬಿಡುವದು ದುರುಗನಿಗೆ ಸುಲಭವಾದ ಕೆಲಸ; ಆದರೆ ಸರಳವಾದ ಕೆಲಸವಲ್ಲ. ಯಾಕೆಂದರೆ ಜೀತದಾಳಾದ ಆತನು ತನ್ನ ಒಡೆಯನ ಕೇಡನ್ನು  ಕನಸುಮನಸಿನಲ್ಲೂ ಎಣಿಸಲಾರ. ದುರುಗನ ಮನದಲ್ಲಿ ನಡೆದ ತುಮುಲದ ವರ್ಣನೆಯನ್ನು ನುಗಡೋಣಿಯವರು ಈ ರೀತಿಯಾಗಿ ಮಾಡಿದ್ದಾರೆ:

ನುಗಡೋಣಿಯವರ ವೈಶಿಷ್ಟ್ಯವೆಂದರೆ, ಅವರು ಶೋಷಿತನ ಬವಣೆಯ ವರ್ಣನೆಗಿಂತ, ಶೋಷಣಾವ್ಯವಸ್ಥೆಯ ಚಿತ್ರಣಕ್ಕೆ ಹೆಚ್ಚು ಮಹತ್ವ ನೀಡುತ್ತಾರೆ. ಇಲ್ಲಿ ದರ್ಪವೇ ಮೂರ್ತಿವೆತ್ತ ಯಜಮಾನ ಹಾಗು ದಾಸ್ಯವೇ ಮೂರ್ತಿವೆತ್ತ ಊಳಿಗದಾಳನ್ನು ಕಾಣುತ್ತೇವೆ.
ಈ ಶೋಷಣಾವ್ಯವಸ್ಥೆಯಲ್ಲಿ ಯಜಮಾನನ ಮನೆತನಕ್ಕೊಬ್ಬ ಹಿತಚಿಂತಕ ಗುರುಗಳೂ ಇರುತ್ತಾರೆ. ಆದರೆ ಬುದ್ಧಿ ಹೇಳುವ ಶಕ್ತಿ ಅವರಿಗಿರುವದಿಲ್ಲ. ಇಂತಹ ಕತೆಗಳ ಅನಿವಾರ್ಯ ದುರಂತವನ್ನು ನಿರ್ಲಿಪ್ತ ಶೈಲಿಯಲ್ಲಿ ಚಿತ್ರಿಸುವದು ನುಗಡೋಣಿಯವರ ಹೆಗ್ಗಳಿಕೆ.

Members

  • vivek hegde
  • Praveen A V
  • SATISH PATTAR
  • Nagabhushan P
  • JAGADEESH.B
  • praveen
  • ganesha karantha
  • pradyumnakumar badnikai
  • laxman
  • chaitra
  • ramesh sarangamath
  • Lokesh.m
  • balagouda m patil
  • NAVEEN MALHOTRA
  • punith.prince007
  • NUTHAN HB
  • Satishvaradaraj
  • Prakash M
  • buddesab
  • vish
 

Photos

Loading…

Blog Posts

NUTHAN HB

ಅಮ್ಮನ ಬುತ್ತಿ ಬೇರಿನಲ್ಲಿ.

ಬೇರಿನಲ್ಲಿ ಬುತ್ತಿ ಕಟ್ಟಿಟ್ಟಿದ್ದಳು ಅಮ್ಮ
ಮರಕೆಲ್ಲಿ ಗೊತ್ತು?
ಎಲ್ಲಿಂದಲೋ ಬಂದ ರಿವಿಕಿರಣಕ್ಕೆ
ಮುಖ ಮಾಡಿತ್ತು!

ಮೈ ಎಲ್ಲ ಮನಮಾಡಿ ಹಸಿರುಗನಸುಗಳ ಹೊತ್ತು
ಮಂದ ಮಾರುತಕ್ಕೆ ಮೈಯ್ಯ ಮರೆತಿತ್ತು!
ಬಳುಕುವ ಬಳ್ಳಿಗೆ ಸೋತು ಅಪ್ಪಿ ಬೆಳೆದಿತ್ತು!
ಬಣ್ನ ಬಣ್ನಗಳ ಹಕ್ಕಿಗಳ ಸಂಸಾರ ಮೈ ಎಲ್ಲ ಹೊತ್ತು
ತಾನೋಬ್ಬನೆ ಆಕಾಶಕ್ಕೇಣಿಯಾಗುವನೆಂದು
ಉಬ್ಬಿ ನಿಂತಿತ್ತು!

ಆಗಸವೂ ಸಿಗದೆ ಅಳುಕಿ ತಡಕಾಡಿ
ಬೇರೂ ಸಿಗದೇ ಬುತ್ತಿಯೂ ಸಿಗದೆ ಕಂಗಾಲಾಗಿತ್ತು!
ಮತ್ತೆ ಬೇರನ್ನರಸಿ ಕೆಳಗಿಳಿದಿತ್ತು!
ತಾನು ತಂದಿದ್ದ ಬುತ್ತಿ ಗೆದ್ದಲ ಗೂಡಿನಲ್ಲಿ
ಜೀರ್ಣವಾಗಿತ್ತು

ಬೇರುಗಳ ಸಂಧಿಯಲ್ಲಿ ಎಲ್ಲೋ ಹಣ್ಣಾಗಿದ್ದ ಈಗ
ಮಣ್ಣಾಗಿದ್ದ ಅದರಮ್ಮ ಹೇಳಿದ್ದು… Continue

Posted by NUTHAN HB on November 21, 2009 at 5:26am

praveen

ಕಟ್ಟೋಣ ಸಂಮೃದ್ದ ಕನ್ನಡ ನಾಡನ್ನ

ಭಾಷೆಯಲ್ಲಿ ಕನ್ನಡ ಚೆನ್ನ
ಹೇಳಿದ್ದು ಹೀಗೆಂದು ಮಹಾಕವಿ ರನ್ನ
ಕನ್ನಡ ಹುಟ್ಟಿದ್ದು ರನ್ನ ಪಂಪರ ಮುನ್ನ
ರಕ್ಷಿಸುತಿಹುದು ಕರ್ನಾಟಕ ನಮ್ಮೆಲ್ಲರನ್ನ
ನಿತ್ಯ ಸತ್ಯ ಎಂದು ಹೊಗಳುವರು ಕನ್ನಡವನ್ನ
ಇದರ ಉಳಿವಿಗಾಗಿ ಯಾರು ಪಡುವುದಿಲ್ಲ ಕಷ್ಟವನ್ನ
ಹೀಗೆ ಆದರೆ ಸದ್ಯದಲ್ಲೇ ತೆರಬೇಕಾಗುವುದು ನಷ್ಟವನ್ನ
ಎಲ್ಲರೂ ದುಡಿಯೋಣ ಉಳಿಸೋಣ ಬೆಳೆಸೋಣ ಕಟ್ಟೋಣ ಸಂಮೃದ್ದ ಕನ್ನಡ ನಾಡನ್ನ
--

Posted by praveen on November 21, 2009 at 12:36am

Dr.B.R.Satyanarayana

ಅಕ್ಕಮಹಾದೇವಿಯ ಹಾಡು - ಪಾಡು : ಭಾಗ - 2

ಕಲ್ಯಾಣದಿಂದ ಶ್ರೀಶೈಲದತ್ತ...
ಮಹಾದೇವಿ ಕಲ್ಯಾಣಕ್ಕೆ ಬರುವ ಮೊದಲೇ ಅವಳ ಕೀರ್ತಿ ಕಲ್ಯಾನಕ್ಕೆ ಬಂದುಬಿಟ್ಟಿತ್ತು. ಅನುಭವಮಂಟಪದ ಅಧ್ಯಕ್ಷನಾದ ಅಲ್ಲಮನಿಗೆ ಮಹಾದೇವಿ ಮಹಾನ್ ಶರಣೆ ಎಂಬುದು ಅವಳ ನಿರ್ಭಿಡೆಯ ನಡೆಯಿಂದಲೇ ಮನದಟ್ಟಾಗಿತ್ತು. ಆದರೂ ಬೇರೆ ಶರಣರಿಗೆ ಅವಳ ಶಿವಭಕ್ತಿಯ ಮಹಿಮೆಯನ್ನು ತೋರುವುದಕ್ಕೋಸ್‌ಕರ ಅವಳನ್ನು ಪರೀಕ್ಷಿಸುವ ನಿರ್ಧಾರಕ್ಕೆ ಬರುತ್ತಾನೆ. ಕಿನ್ನರಿ ಬೊಮ್ಮಯ್ಯನನ್ನು ಕರೆದು, ಬಾಗಿಲಿನಲ್ಲಿಯೇ ಮಹಾದೇವಿಯನ್ನು ಪರೀಕ್ಷಿಸಿ ನೋಡಲು ಹೇಳುತ್ತಾನೆ. ಆಗ ಕಿನ್ನರಿ ಬೊಮ್ಮಯ್ಯ ಬಾಗಿಲಿನಲ್ಲಿಯೇ ಅವಳನ್ನು ತಡೆದು ಪರೀಕ್ಷಿಸುತ್ತಾನೆ. ತಾನು ಮಹಾ… Continue

Posted by Dr.B.R.Satyanarayana on November 19, 2009 at 9:09pm

KARNATAKA KANNADA

ಕನ್ನಡಕೂಟ ಯು.ಎ.ಇ.ದುಬೈ ಯಿಂದ. ೫೩ನೇ ಕರ್ನಾಟಕ ರಾಜ್ಯೋತ್ಸವ






ಕನ್ನಡಕೂಟ ಯು.ಎ.ಇ.ದುಬೈ ಯಿಂದ. ೫೩ನೇ ಕರ್ನಾಟಕ ರಾಜ್ಯೋತ್ಸವ

{ ವರದಿ:’ಕನ್ನಡಸುತ’ದುಬೈ.ಚಿತ್ರ: ಅಶೋಕ್ ಬೆಳ್ಮಣ್}

ನವಂಬರ ೧೩,ಶುಕ್ರವಾರ ದುಬೈನ… Continue

Posted by KARNATAKA KANNADA on November 19, 2009 at 8:39pm — 1 Comment

Santhosh Kumar BJ

ನೀನಿಲ್ಲದೆ ಸವಿಯುವ ಕಲ್ಪನೆಯಾದರೂ ಏಕೆ?

ನಾ ತಣ್ಣಗಿನ ತಂಗಾಳಿಯಲ್ಲಿ
ಮೈ ಮರೆತು ಕುಳಿತಿರುವಾಗ
ನೀ ಮೈ ಕೊರೆಯುವ ಚಳಿಯಲ್ಲಿ
ಶೀಖರವ ಏರುತಿರುವುದಾದರು ಏಕೆ ?

ನಾ ಬೆಚ್ಚಗಿನ ಹೊದಿಕೆಯಲ್ಲಿ
ನಿದ್ರಾ ದೇವತೆಯ ಬಳಿ ಹೋದಾಗ
ನೀ ನಿದ್ರಾ ಹೀನನಾಗಿ
ದೂರಕೆ ಹೋಗುತ್ತಿರುವುದಾದರೂ ಏಕೆ?

ನಾ ನನ್ನ ಪ್ರೇಯಸಿಯ ಜೊತೆ
ಊರಿನ ಬೀದಿ ತಿರುಗುತ್ತಿರುವಾಗ
ನೀ ಮಡದಿಯ ಬಿಟ್ಟು
ಪರ್ವತ ತಪ್ಪಲ ಬಳಿ ತಿರುಗುತ್ತಿರುವುದಾದರು ಏಕೆ ?

ನಾ ಉದುರುವ ಹುಲ್ಲುಗಡ್ಡಿ
ನೀ ಪರ್ವತ ಶಿಖರ
ಈ ಉದುರುವ ಹುಲ್ಲುಗಡ್ಡಿಯ
ರಕ್ಷಿಸಲು ಪಣ ತೊಟ್ಟಿರುವುದಾದರೂ ಏಕೆ?

ನಾ ಸ್ವತಂತ್ರನು
ನೀ ಸ್ವಾತಂತ್ರ್ಯದ ರಕ್ಷಕನು
ನೀ ಕೊಟ್ಟ ಈ ಭೀಕ್ಷೆಯನ್ನು
ನೀನಿಲ್ಲದೆ ಸವಿಯುವ ಕಲ್ಪನೆಯಾದರೂ ಏಕೆ?

Posted by Santhosh Kumar BJ on November 17, 2009 at 10:56am

deepika

ಅಮ್ಮನ ಒಡಲು...... ವಾತ್ಸಲ್ಯದ ಮಡಿಲು ..........

ತಂದೆ ತಾಯಿಯಾರ ಪ್ರೀತಿ ಸವಿದು ,ಅವರ ಮಾರ್ಗದರ್ಶನದಲ್ಲಿ ಬೆಳೆದು ಒಬ್ಬ ಮನುಷ್ಯನಾಗಿ ಬೆಳೆಯುತ್ತೇವೆ .ಮುಂದೆ ರೆಕ್ಕೆ ಬಲಿತ ಹಕ್ಕಿಯಂತೆ ನಾವೇ ಸೃಷ್ಟಿಸಿಕೊಂಡ ಪ್ರಪಂಚದಲ್ಲಿ ,ತಂದೆ ತಾಯಿಯಾರಿಗೆ ಸ್ಥಾನವಿಲ್ಲದಂತೆ ಮಾಡುವುದು ಎಲ್ಲಿಯ ಸಂಸ್ಕೃತಿ ?
ನಮ್ಮಗಾಗಿ ತಮ್ಮ ಜೀವನವನ್ನು ತೇಯ್ದು ತನ್ನ ಸುಖವನ್ನು ನಮ್ಮಗೆ ನೀಡಿದವರು,ಅವರು ಅಬಲರಾಗಿರುವಾಗ ಅವರು ನಮ್ಮಗೆ ಹೋರೆ ಎನ್ನುವಂತೆ ವರ್ತಿಸಿ ಅವರನ್ನು ಮಾನಸಿಕವಾಗಿ ದುರ್ಬಲರನ್ನಾಗಿ ಮಾಡುತ್ತೇವೆ.

ಸಹಿಸಲಸಧ್ಯವಾಗಿ ತಂದೆ ತಾಯಿ ಒಂದೆರಡು ಮಾತನಾಡಿದರೆ ಅದು "ಅರಳು-ಮರಳು" ಎಂದು ಹೆಸರು ಪದೆದುಕೊಳುತ್ತದೆ?
ಪರಸ್ಪರ ಪ್ರೀತಿ,ಸಹಬಾಳ್ವೆಗೆ ಹೆಸರಾಗಿರುವ ಭಾರತೀಯ ಸಂಸ್ಕೃತಿಗೆ… Continue

Posted by deepika on November 17, 2009 at 7:00am — 5 Comments

ನೀಬರುವ ದಾರಿ ! ನನ್ನೊಲವಿನ ಗೋರಿ.

ಪ್ರಶ್ನೆಗಳಿಗೆ ಉತ್ತರ ಬೇಕಿದೆ ?




ಇಲ್ಲಿ ಪ್ರೇಶ್ನೆ ಅನ್ನೋದು ಪ್ರಶ್ನೆ ಆಗಬೇಕಿತ್ತು ತಪ್ಪಾಗಿದೆ ದಯವಿಟ್ಟು ಪ್ರೇಶ್ನೆ ಬದಲು ಪ್ರಶ್ನೆ ಎಂದು ಓದಿಕೊಳ್ಳಿ

Posted by ನೀಬರುವ ದಾರಿ ! ನನ್ನೊಲವಿನ ಗೋರಿ. on November 17, 2009 at 2:00am — 2 Comments

Govardhana K N

ನನ್ನ ಕೆಲವು ಕವನಗಳು.....

ಕೊಡುತಲಿರು ಇರುವಾಗ
ಕೊಡುತಲಿರು ಇರುವಾಗ,
ಕೂಡಿಟ್ಟದ್ದು ಮರಿ ಹಾಕುವುದಿಲ್ಲ,
ನೀ ಮಾಡುವ ಒಂದು ಕಾರ್ಯ,
ನೀ ಸತ್ತರು ಸಾಯುವುದಿಲ್ಲ,
ಅವ ಹೋಗಲಿ, ಇವ ಮಾಡಲಿ, ಆ ಕೆಲಸ ಎನದಲ್ಲ,
ಎಂದು ಕೈ ಕಟ್ಟಿ ಕುಳಿತರೆ
ಈ ನಾಡು ಬೆಳೆಯಲ್ಲ!!

ವಿರಹ!
ಸುರಿವ ಮಳೆಯು ಪರದೆಯ ಕಟ್ಟಿ
ಆಡಿಸುತಿದೆ ಹಳೆಯ ನೆನಪುಗಳ ನಾಟಕ
ಮರೆತ ಗಾಯವ ಕೆದಕುತ ಮತ್ತೆ
ತೆರೆಸಿದೆ ಮನದಲೊಂದು ವಿರಹದ ಘಟಕ
ಮಾಜಿ ಪ್ರೇಮಿಯ ಮಾಡಿದ ಗೆಳತಿಯ
ನಗುವ ಮೊಗವನು ಅಲೆಯಂತೆ ಕುಣಿಸಿ
ಹರಿದ ಕಂಬನಿ ಕಾಣಿಸದಂತೆ
ತನ್ನ ತೊಳೊಳಗೆ ನನ್ನನೆ ತುಂಬಿಸಿ
ಸರ್ರನೆ ಸುರಿಯುತ ಎದೆಯ ಕಡಲಿಗೆ
ಬಡಿದ್ದೆಬ್ಬಿಸಿದೆ ಸುನಾಮಿಯ ಅಲೆ
ಸದ್ದು ಮಾಡದೆ ಹೃದಯವ ಒಡೆದ… Continue

Posted by Govardhana K N on November 16, 2009 at 8:22am

JAGADEESH.B

ಈ-ಕವಿ ಕವನ

ಮೌನವೇ ಮುನಿಸೇಕೆ ಮನಸ ಮೇಲೆ...
ಮುಸುಕು ಸರಿಸಿರುವೆ ಮಾತಿನ ಮೇಲೆ..
ಮಾತು ಬಾರದ ಹಾಗೆ...
ಪ್ರೀತಿ ಹೇಳದ ಹಾಗೆ...;

ಪ್ರೀತಿಯ ಹೊತ್ತಿಗೆಗೆ ಮುನ್ನುಡಿ ಬರೆದು..
ಎಲ್ಲೆಡೆ ನೋಡಿದರು ನೀನೆ ಕಾಣುವ ಕನ್ನಡಿ ಹಿಡಿದು..
ಮಾತಾಡುವ ಮುಂಚೆ ಶಾಪವಿತ್ತೆ ಏಕೆ..
ಮೌನವೇ ಮನಸ ಮೇಲೆ ಈ ಮುನಿಸೇಕೆ...;

ತೀರದ ಕನಸಿನ ಅಲೆ ಎದೆ ಬಿಡಿದು..
ಚಿಗುರಿದ ಮೊದಲ ಸಿಹಿ ಒಲವದು..
ಮಾತಾಗುವ ಮುಂಚೆ ಮೂಕವಯಿತೇಕೆ...
ಮೌನವೇ ಮನಸ ಮೇಲೆ ಈ ಮುನಿಸೇಕೆ..;



-ಜಗದೀಶ್.ಬಿ

Posted by JAGADEESH.B on November 15, 2009 at 5:49pm — 5 Comments

RSS

ಎಲ್ಲ ಮರೆತಿರುವಾಗ....

ಹೊರಗೆ ಮುಸಲಧಾರೆಯ ಆರ್ಭಟಕ್ಕೆ ಸುಯ್ಯೆಂದು ಬೀಸುವ ಗಾಳಿ ಸಾಥ್ ನೀಡುತ್ತಿದ್ದರೆ, ಒಳಗೆ ಬೆಚ್ಚಗೆ ಸ್ವೆಟರ್ ಹಾಕಿಕೊಂಡು ಒಂದು ಕೈಯಲ್ಲಿ ಬಿಸಿ ಕಾಫಿಯನ್ನೂ ಇನ್ನೊಂದು ಕೈಯಲ್ಲಿ ಕಾರಂತರ "ಮೂಕಜ್ಜಿಯ ಕನಸುಗಳನ್ನೂ" ಹಿಡಿದುಕೊಂಡು ಕುಳಿತಿದ್ದಳು ಪಾವನಿ. ಹಾಗಂತ ಇದೇ ಮೊದಲೇನಲ್ಲ ಆಕೆ ಈ ಕಾದಂಬರಿಯನ್ನು ಓದುತ್ತಿರುವುದು. ಕಳೆದ ನಾಲ್ಕೈದು ವರ್ಷಗಳಲ್ಲಿ ಮೂರು ಸಲ ಓದಿ ಮುಗಿಸಿದ್ದಾಗಿದೆ. ಇದು ನಾಲ್ಕನೆಯ ಬಾರಿ ಅಷ್ಟೇ. ಅದೇನೋ ಎಂತೋ ಮೂಕಜ್ಜಿಯ ಕನವರಿಕೆಗಳು, ವಿಚಿತ್ರ ಕನಸುಗಳು ಹಾಗೂ ಆಕೆಯೊಳಗಿನ ವಿಶೇಷತೆಯಾದ ವಸ್ತು ಸ್ಪರ್ಶ ಮಾತ್ರದಿಂದ ಜನರನ್ನೇ ಅಳೆಯುವ ಪರಿ, ಎಲ್ಲವೂ ಪ್ರತಿ ಸಲ ಓದುವಾಗಲೂ ಅವಳಲ್ಲೊಂದು ವಿನೂತನ ಭಾವವನ್ನು ಭಿತ್ತುತ್ತಿದ್ದವು. ಇವೆಲ್ಲವುಗಳ ಜೊತೆಗೇ ಸದಾ ಆಕೆಯನ್ನು ಕಾಡುತ್ತಿದ್ದುದು ತನ್ನ ಮೂರೂರಜ್ಜಿಯ ನೆನಪುಗಳು. ಎಲ್ಲೋ ಒಂದು ಮೂಲೆಯಲ್ಲಿ ಪಾವನಿ ಮೂರೂರಜ್ಜಿಯನ್ನು ಮೂಕಜ್ಜಿಯೊಂದಿಗೆ ಹೋಲಿಸಿಕೊಂಡು ನೋಡುತ್ತಿದ್ದಳು. ಕ್ರಮೇಣ ಅವಳ ಮನಃಪಟಲದಲ್ಲಿ ಮೂಕಜ್ಜಿಯೇ ಮೂರೂರಜ್ಜಿಯಾಗಿ ಮಾರ್ಪಾಡಾಗುತ್ತಿದ್ದಳು. ಇದಕ್ಕೆ ಮೂಲ ಕಾರಣ ಇಬ್ಬರ ಹೆಸರೂ ಮೂಕಾಂಬಿಕೆಯಾಗಿದ್ದುದೂ ಹೌದು.

ಪಾವನಿಯ ಅಜ್ಜ ಅಂದರೆ ತಾಯಿಯ ತಂದೆಯ ಏಕಮಾತ್ರ ತಂಗಿಯೇ ಈ ಮೂರೂರಜ್ಜಿ. ಅಣ್ಣ ತಂಗಿಯರ ಅನುಬಂಧ, ವಾತ್ಸಲ್ಯವನ್ನು ಸ್ವತಃ ತನ್ನಜ್ಜಿ ಅಂದರೆ ತಾಯಿಯ ತಾಯಿಯ ಮೂಲಕವೇ ಅನೇಕ ಬಾರಿ ಕೇಳಿದ್ದಳು. "ಆಯಿ ನಿಜ ಹೇಳು ನೀನೂ ಮೂರೂರಜ್ಜಿ ಯಾವತ್ತೂ ಠೂ ಬಿಟ್ಟಿದ್ದಿಲ್ಯ? ಜಗ್ಳ ಆಡಿದ್ದಿಲ್ಯ? ಆವಾಗ ಅಜ್ಜ ಯಾರ ಪಕ್ಷ ವಹಿಸ್ತಿದ್ದ? ನಿಂದೋ ತನ್ನ ತಂಗಿದೋ?" ಎಂದು ಪಾವನಿ ಕೆಣಕಲು ಸರಸಮ್ಮ ತನ್ನ ಬೊಚ್ಚು ಬಾಯಿ ತೆಗೆದು ಗೊಳ್ಳೆಂದು ನಕ್ಕಿದ್ದರು. "ಎಂತ ಕೂಸೇ ನಂಗವೆಂತ ನಿಂಗ್ಳ ಈಗಿನ ಆ ಸುಡುಗಾಡು ಧಾರಾಹಿ ತರಹ ಹೇಳಿ ಮಾಡ್ಕಂಜ್ಯ? ಅದು ನನ್ನ ನಾದ್ನಿಗಿಂತ ಹೆಚ್ಚಾಗಿದ್ದು ತಿಳ್ಕ. ಅದೂ ಅಲ್ದೇ ಪಾಪ ಅದ್ರ ಜೀವ್ನವೇ ಒಂದು ಗೋಳಾಟ ಆಗಿರಕಿರೆ ನಾ ಎಂತಕ್ಕೆ ಸುಮ್ನೆ ಜಗ್ಳ ಆಡ್ಲಿ ಹೇಳು? ಆ ಬಡ್ವೆಯಾದ್ರೂ ಎಂತಕ್ಕೇ ಹೇಳಿ ನನ್ನ ಜೊತೆಗೆ ಮಾತಿಗೆ ನಿಲ್ಗು? ಹಾಂಗೆ ನೋಡಿದ್ರೆ ಮೂಕಾಂಬೆ ಹುಟ್ಟಿ, ಬದ್ಕಿದ್ದೇ ಒಂದು ಪವಾಡ.. ಆದ್ರೆ ಅದು ಜೀವನ್ದಲ್ಲಿ ಕಂಡ ದುಃಖ, ಸಂಕ್ಟ ಎಣ್ಸಿದ್ರೆ ಒಂದೊದ್ಸಲ ಅದು ಬದ್ಕಿದ್ದಾದ್ರೂ ಎಂತಕ್ಕನೋ ಕಂಡಿತ್ತು ನನ್ಗೆ ನೋಡು..." ಎಂದು ಹೇಳುತ್ತಾ ಆಕೆಯ ಕಣ್ಣಂಚಿನಲ್ಲಿಣುಕಿದ ವ್ಯಥೆಯ ಬಿಸಿ ಪಾವನಿಯನ್ನೂ ತಾಗಿದಂತಾಗಿತ್ತು.

"ಕೂಸೆ ಮೂಕಾಂಬೆ ಹುಟ್ಟಿದಾಗ ಮಾವ್ನೋರಿಗೆ ರಾಶಿ ಖುಶಿ ಆಗಿತ್ತಡ.. ಹೆರಿಗೆ ರಾಶಿ ಕಷ್ಟ ಆಗಿ ಅತ್ತೇರು ಬದ್ಕಿದ್ದೇ ದೊಡ್ಡದು.... ಹುಟ್ಟು ಒಂದು ದಿವ್ಸ ಕೂಸು ಕುಂಯ್ಯಿ..ಕುಂಯ್ಯಿ.. ಅಂದಿದ್ದು, ಮಾರನೇ ದಿವ್ಸ ಸದ್ದೇ ಇಲ್ಯಡ ನೋಡು. ಆಗೋತು... ಕಥೆ ಮೂಗ್ದೇ ಹೋತು... ಋಣ ಇಷ್ಟೇ ಇದ್ದಿತ್ತು ಇದ್ರಿದ್ದು.. ಹೇಳಿ ಅಂದ್ಕಂಡು ಮಾವ್ನೋರು ನಿನ್ನಜ್ಜ ಎಲ್ಲಾ ಸೇರಿ ಕಣ್ಣೀರ‍ಿಡ್ತಾ ಗುಂಡಿ ತೋಡಿ ಅದ್ನ ಹಾಕಿದ್ದೇ ತಡ ನೋಡು.. ಮತ್ತೆ ಸಣ್ಣಕೆ ಕುಂಯ್ಯಿ ಅಂತಡ. ಇವ್ಕೆ ಒಂದ್ಸಲ ಕೈಕಾಲೇ ಆಡಿದ್ದಿಲ್ಯಡ. ಒಂದು ಚೂರು ಆಚೀಚೆ ಆಗಿದ್ರೆ ಎಂತಾ ಅನಾಹುತ ಆಗ್ತಿತ್ತು ಹೇಳು? ಅದ್ರ ಪ್ರಾಣಾನ ಆ ಯಮರಾಜ ಹಿಂದೇನೆ ಕಳ್ಸುವುಟ ನೋಡು.. ಇಲ್ಲೇ ಅನುಭವಿಸ್ಲಿ ಹೇಳಾದಿಕ್ಕು.. ಹ್ಮಂ.. ಎಲ್ಲಾ ಬ್ರಹ್ಮರಾಯನ ಹಣೆಬರಹ.. ಪಾಪ.. ಸತ್ತೇಹೋತು ಹೇಳಿ ಅಂದ್ಕಂಡಿದ್ದು ಬದಿಕಂಡು ಇವತ್ತಿನವರೆಗೂ ಸಾಯ್ತಾನೇ ಇದ್ದು.." ಎಂದು ಸೆರಗಂಚಿನಿಂದ ಕಣ್ಣೊರೆಸಿಕೊಂಡಿದ್ದಳು ಸರಸಮ್ಮ.

ಆಯಿ ಹೇಳಿದ್ದ ಈ ಕಥೆಯನ್ನು ತನ್ನ ತಾಯಿಯ ಬಾಯಿಯಲ್ಲಿ ಅದೆಷ್ಟೋ ಬಾರಿ ಕೇಳಿ ವಿಸ್ಮಿತಳಾಗಿದ್ದಳು ಪಾವನಿ. ಇನ್ನೇನು ಮಣ್ಣಾಗ ಬೇಕಿದ್ದ ಕೂಸು ಉಸಿರಾಡಿ ಬಾಳಿ ಬದುಕಿದ್ದು ಒಂದು ಅಪೂರ್ವ ಸಂಗತಿ ಎನಿಸಿತ್ತು ಅವಳಿಗೆ. ಪಾವನಿಯ ತಾಯಿ ತನ್ನ ಬಾಲ್ಯವನ್ನೆಲ್ಲಾ ಕಳೆದದ್ದು ಸೋದರತ್ತೆಯ ಮನೆಯಾದ ಮೂರೂರಿನಲ್ಲೇ ಆಗಿತ್ತು. ಹಾಗಾಗಿ ಇನ್ನೂ ಆಕೆಗೆ ಅವಳ ಕಂಡರೆ ವಿಶೇಷ ಮಮತೆ. ಹೆತ್ತ ಮಕ್ಕಳು ಬರಲು ಹಿಂದೆ ಮುಂದೆ ನೋಡಿದರೂ ಅವಳು ಮಾತ್ರ ವರುಷಕ್ಕೆರಡು ಬಾರಿಯಾದರೂ ಪಾವನಿಯ ಕರೆದುಕೊಂಡು ಸೋದರತ್ತೆಯನ್ನು ಕಂಡು ಬರುತ್ತಿದ್ದಳು. ಆದರೂ ಪಾವನಿಗೆ ಕೆಲವೊಂದು ವಿಷಯಗಳ ಸ್ಪಷ್ಟತೆ ಈವರೆಗೂ ಆಗಿರಲಿಲ್ಲ. ಯಾಕೆ ತನ್ನಜ್ಜ, ಮೂರೂರಜ್ಜಿಯನ್ನು ಮುಖ ನೋಡಿ ಮಾತಾಡಿಸೊಲ್ಲ?.. ಯಾಕೆ ಮೂರೂರಜ್ಜಿ ತನ್ನ ಅಣ್ಣಯ್ಯನೆದುರು ಬರಲು ಆದಷ್ಟು ಹಿಂದೇಟು ಹಾಕುತ್ತಾಳೆ? ಅಂಥದ್ದೇನು ನಡೆದಿರಬಹುದು ಎಂದು ಎಷ್ಟೋ ಸಲ ಅಮ್ಮನನ್ನೂ ಕೇಳಿದ್ದಳು. ಆದರೆ ಅಷ್ಟೊಂದು ಸಮರ್ಪಕ ಉತ್ತರವೇನೂ ಆಕೆಗೆ ಸಿಕ್ಕಿರಲಿಲ್ಲ. ತನ್ನತ್ತೆಯ ಗೋಳಿನ ಕಥೆಯನ್ನು ಮತ್ತೆ ಹೇಳಲಿಚ್ಚಿಸದೆಯೋ ಇಲ್ಲಾ ಹಿಂದೆ ನಡೆದ ಕಹಿ ನೆನಪುಗಳನ್ನು ಮತ್ತೆ ಹಸಿರಾಗಿಸಲು ಇಷ್ಟವಾಗದೆಯೋ ಹಾರಿಕೆಯ ಉತ್ತರವನ್ನಷ್ಟೇ ನೀಡಿದ್ದಳು. ಆದರೆ ತನ್ನ ಸಂಶಯಗಳಿಗೆಲ್ಲಾ ಸರಿಯಾದ ಉತ್ತರಗಳನ್ನು ಪಾವನಿ ಮುಂದೊಂದು ದಿನ ತನ್ನ ಆಯಿಯ ಬಳಿಯೇ ಕೇಳಿದಳು. ಸರಸಮ್ಮನ ಸ್ಮೃತಿಪಟಲದಲ್ಲಿ ಆ ಕಹಿ ಘಟನೆ ಎಂದೂ ಮರೆಯಲಾಗದ ಛವಿಯನ್ನೊತ್ತಿತ್ತು. ಹೇಗೆ ತಾನೇ ಆಕೆ ಮರೆತಾರು ತನ್ನ ಪ್ರಿಯ ನಾದಿನಿಯ ಆ ಕರುಣಾಜನಕ ಸ್ಥಿತಿಯನ್ನು.

ಮೂಕಾಂಬಿಕೆ ಹುಟ್ಟಿ ಮರುಜನ್ಮ ಪಡೆದದ್ದೇ ಒಂದು ಪವಾಡವಷ್ಟೇ. ಆದರೆ ಆಕೆಯ ಬದುಕಿನಲ್ಲೇನೂ ಪವಾಡ ನಡೆಯಲೇ ಇಲ್ಲಾ. ಇಲ್ಲೇ ಸ್ವರ್ಗ..ಇಲ್ಲೇ ನರಕ ಎಂಬತೆ ಜೀವ ಪಡೆದದ್ದೇ ಸ್ವರ್ಗ ಉಳಿದದ್ದೆಲ್ಲಾ ನರಕ ಎಂಬಂತಾಗಿತ್ತು ಆಕೆಯ ಬದುಕು ಮುಂದೆ. ನರಸಿಂಹ ಜೋಯಿಸರು ಸರಸಮ್ಮನ ವರಿಸಿ ಗುಬ್ಬಿಮನೆಗೆ ತಂದ ವರುಷದೊಳಗೇ ಮೂಕಾಂಬಿಕೆಯನ್ನೂ ಕನ್ಯಾದಾನ ಮಾಡಿ ಕಳುಹಿಸಿದ್ದರು. ಏಕ ಮಾತ್ರ ತಂಗಿಯ ಮದುವೆಯನ್ನು ಗೊತ್ತುಮಾಡುವ ಮೊದಲು ಯೋಗ್ಯ ವರನಿಗಾಗಿ ಜೋಯಿಸರು ಚೆನ್ನಾಗಿಯೇ ಹುಡುಕಿದ್ದರು. ಅಂತೂ ಕೊನೆಗೆ ಸಿಕ್ಕಿದ್ದು ಕುಮಟಾದಿಂದ ೬-೭ ಕಿ.ಮೀ ದೂರದ ಮೂರೂರಿನ ಶ್ರೀಪತಿ ಹೆಗಡೆ. "ಜೋಯ್ಸ್‌ರೇ ಚಿನ್ನದ ತುಂಡು ಮಾಣಿ.. ಕಣ್ಮುಚ್ಕ ಮದ್ವೆ ಮಾಡ್ಲಕ್ಕು.. ದೊಡ್ಡ ಮಾತೇ ಆಡ್ತ್ನಿಲ್ಲೆ ನೋಡಿ.. ನಿಮ್ಮ ಕೂಸು ಆರಾಮಾಗಿರ್ತು" ಎಂದು ಮೂರೂರು, ಕಲ್ಲಬ್ಬೆಯ ಆಚೀಚೆ ಮನೆಯವರು ಹೇಳಿದ್ದು ಕೇಳಿಯೇ ಜೋಯಿಸರು ಧಾರೆ ಎರೆದು ಕೊಟ್ಟಿದ್ದರು. ಹದಿನಾರರಲ್ಲಿಯೇ ಹಸೆಮಣೆ ಏರಿ ಹೊಸಬದುಕ ಕನಸ ಹೊತ್ತು ಗುಬ್ಬಿಮನೆಯಿಂದ ಮೂರೂರು ಸೇರಿದ ಮೂಕಾಂಬೆಯ ಬಾಳು ಮೂರಾಬಟ್ಟೆ ಆಗಲು ಹೆಚ್ಚು ಸಮಯವೇನೂ ಬೇಕಾಗಲಿಲ್ಲ.

ಊರವರ ಮಾತಿಗೆ ಮರುಳಾಗಿ ಮೋಸ ಹೋಗಿದ್ದ ಮೂಕಾಂಬೆಯ ಅಣ್ಣಯ್ಯ ಹಾಗೂ ತಂದೆಗೆ ಶ್ರೀಪತಿಯ ನಿಜ ಬಣ್ಣ ತಿಳಿಯಲು ತಿಂಗಳೂ ಬೇಕಾಗಲಿಲ್ಲ. ಹದಿನೈದು ದಿನಕ್ಕೊಮ್ಮೆ ಉಕ್ಕೇರುವ ಆತನ ಹುಚ್ಚುತನ ಮೂಕಾಂಬೆಯ ಜೊತೆಗೆ ಅವಳ ತವರನ್ನೂ ಮಂಕಾಗಿಸಿಬಿಟ್ಟಿತು. ತಿಂಗಳಲ್ಲಿ ಹದಿನೈದು ದಿನ ಮಂಕಾಗಿ ಕುಳಿತಿದ್ದು, ತನಗರಿತ ಕೆಲಸ ಕಾರ್ಯ ಮಾಡಿಕೊಂಡಿರುತ್ತಿದ್ದ ಶ್ರೀಪತಿ ತಿಂಗಳು ಕಳೆಯುವುದರೊಳಗೆ ಬುದ್ಧಿಭ್ರಮಣೆಗೊಳಗಾಗಿ ಅಸಂಬದ್ಧವಗಿ ವರ್ತಿಸುತ್ತಿದ್ದ. "ಕೂಸೆ ಎಂತ ಕೇಳ್ತೆ ನೀನು....ಹುಣ್ಣಿಮೆ ಅಮಾವಾಸ್ಯೆಗೆಲ್ಲಾ ಹುಚ್ಚೇರಿ ಸರ ಸರನೆ ತೆಂಗಿನ ಮರ, ಅಡ್ಕೆ ಮರ ಹತ್ತಿ ಬರ ಬರನೆ ಕಾಯೆಲ್ಲಾ ಉದ್ರಿಸಿ ಹಾಕ್ತಿದ್ದ.... ಓಡೋಗಿ ಎಲ್ಲಾ ಅವ್ನ ಎಳ್ಕ ಬರಕಾಗಿತ್ತು. ಆಗಿನ ಕಾಲ್ದಲ್ಲಿ ಸುಟ್ಟ್ ಕುಮ್ಟೇಲೂ ಹುಚ್ಚಿನ ಡಾಕ್ಟ್ರ ಇದ್ದಿದ್ನಿಲ್ಲೆ. ಅದ್ರ ಕಷ್ಟ ನೋಡಲಾಗ್ದೇ ನಂಗವೇ ಎಂಥದೋ ಹಳ್ಳಿ ಔಷ್ದಿನೇ ಮಾಡ್ಸಿ ನೋಡ್ದೋ.. ಆದ್ರೂ ಕಡ್ಮೆ ಆಜಿಲ್ಲೆ...ಹದ್ನೆಂಟು ವರ್ಷಕ್ಕೇ ಮೂಕಾಂಬೆಗೆ ಅರ್ವತ್ತಾದಾಂಗೆ ಅನಿಸ್ತಿತ್ತು. ಚಿಂತೆ ಮಾಡಿ ಮಾಡಿ ಮಾವ್ನೋರು ಹಾಸ್ಗೆ ಹಿಡ್ದಾಗಿತ್ತು ನೋಡು. ಮಧ್ಯೆ ಎರ್ಡು ಪುಟ್ಟ ಗಂಡು ಮಕ್ಕ ಬೇರೆ. ಎಂತ ಮಾಡ್ತೆ ಹೇಳು? ನಿನ್ನಜ್ಜ ಮಾಡ್ದೇ ಹೋದ ಪೂಜೆಯಿಲ್ಲೆ...ಊಹೂಂ ಎಂತೂ ಪ್ರಯೋಜ್ನ ಆಜಿಲ್ಲೆ... ಪಾಪ ಅವ್ನ ಹುಚ್ಚಿಗೋ ಇಲ್ಲ ಮೂಕಾಂಬೆ ವ್ಯಸನಕ್ಕೋ ಕೊನೆ ಹೇಳು ಹಾಂಗೆ ಇಪ್ಪತ್ನಾಲ್ಕು ವರ್ಷಕ್ಕೇ ಮೂಕಾಂಬೆಕೆ ಗಂಡ ಹೇಳಂವ ಇಲ್ಲಗಿದ್ದಾಂಗಾದ..ಇದ್ರ ನರ್ಕಕ್ಕೆ ದೂಡಿ ತಾನು ಸತ್ತು ಸ್ವರ್ಗ ಸೇರ್ದ...ಹ್ಮ್ಂ... ಮೊದ್ಲಾದ್ರೂ ಎನು ಸುಖಾ ಇತ್ತು ಹೇಳಿ ಇದು ದುಃಖ ಪಡವು ಹೇಳು.. ಸ್ವಲ್ಪ ದಿನ ಇಲ್ಲೇ ಇತ್ತು ನಂಗ್ಳ ಜೊತೆಗೆ.. ಎರ್ಡು ಗಂಡುಮಕ್ಕನೂ ಇಲ್ಲೇ ಶಾಲೆಗೆ ಹೋಗ್ತಿದ್ದೋ..." ಎಂದು ಸರಸಮ್ಮ ಕಣ್ಣೀರೊರೆಸಿಕೊಂಡಾಗ ಪಾವನಿಯ ಕಣ್ಣಂಚೂ ಒದ್ದೆಯಾಗಿತ್ತು.

ಗಂಡ ಸತ್ತ ಮರುದಿವಸವೇ ಮೂಕಾಂಬೆ ತವರಿಗೆ ಬಂದಿದ್ದಳು. ಮಗಳ ದುರ್ಗತಿ ಕಂಡು ದೊಡ್ಡ ಜೋಯಿಸರು ಅತೀವ ದುಃಖ ಪಟ್ಟರೂ ಹಳೆಕಾಲದ ಸಂಪ್ರದಾಯ ಮಾತ್ರ ಮರೆಯಲಿಲ್ಲ. ಮೊದಲಿನಿಂದಲೂ ಮೂಕಾಂಬೆಗೆ ತನ್ನ ಮಾರುದ್ದದ ಕೂದಲ ಮೇಲೆ ಅತೀವ ಅಭಿಮಾನ. ಬಿಗಿಯಾಗಿ ಒಂದು ಜಡೆಹಾಕಿದರೆ ಅದು ಕರಿನಾಗರದಷ್ಟು ಉದ್ದವಾಗುತ್ತಿತ್ತು. ಮಿರಮಿರನೆ ಮಿಂಚುವ ಆ ಕೂದಲನ್ನು ಮೊಗ್ಗಿನದಂಡೆಗಳಿಂದ ಅಲಂಕರಿಸುವುದೆಂದರೆ ಅವಳಿಗದೆಂಥದೋ ಸಂತೋಷ. ಆದರೆ ವೈಧವ್ಯ ಅವಳ ಆ ಜಡೆಯ ಸುಖಕ್ಕೂ ಕತ್ತರಿ ಹಾಕಿತ್ತು. "ಅಪ್ಪಯ್ಯ ಬ್ಯಾಡ... ಈಗ ಕಾಲ ಬದ್ಲಾಜು.. ಮೂಕಾಂಬೆಗೆ ಮನಸ್ಸಿಲ್ಲೆ ಅಂದ್ರೆ ಬಿಟ್ಬುಡು.. ಪಾಪ ಬಡವೆ ಮೊದ್ಲೇ ಬೇಜಾರದಲ್ಲಿದ್ದು.. ಕೂದ್ಲೆಲ್ಲಾ ತೆಗ್ಸದು ಬೇಡ.."ಎಂದು ಗೋಗರೆದ ಮಗನ ಮಾತಿಗೂ "ಅತ್ಗೆ ನೀನಾದ್ರೂ ಹೇಳೆ.. ನಾ ಬಳೆ, ಕುಂಕಮ, ಹೂವು ಎಲ್ಲಾ ಬಿಡ್ತಿ ಆದ್ರೆ ಈ ಕೂದ್ಲೊಂದು ತೆಗ್ಸದು ಬ್ಯಾಡ ಹೇಳೆ.. ಕೈ ಮುಗಿತಿ.." ಎಂದು ಗೋಳಾಡಿದ ಮಗಳ ದುಃಖವನ್ನೂ ಮರೆತು.."ಮಾವಯ್ಯ ಯಾರೇನಾರ ಹೇಳ್ಕಳ್ಲಿ..ಎಲ್ಲದಕ್ಕಿಂತ ಮೂಕಾಂಬೆ ದುಃಖ ದೊಡ್ಡದು ಇದೆಲ್ಲಾ ಬೇಡ.." ಎಂದು ಮೊದಲಬಾರಿ ಎದುರು ನಿಂತು ಮಾತಾಡಿದ ಸೊಸೆಯ ಮಾತನ್ನೂ ಮೀರಿ ದೊಡ್ಡ ಜೋಯಿಸರು ಹಠ ಹೊತ್ತು ಆ ಸುಂದರ ಕೇಶರಾಶಿಯನ್ನು ಹೊಳೆಪಾಲು ಮಾಡಿಬಿಟ್ಟರು. "ನಿನ್ನ ಕೂದ್ಲಿಂದ ನೀರು ತೊಟ್ಟಿಕ್ಕಿರೆ ನಮ್ಗೆ ಒಳ್ಳೇದಾಗ್ತಿಲ್ಲೆ..ಒಂದೋ ನೀ ಕೂದ್ಲು ತೆಗ್ಸು.. ಇಲ್ಲಾ ನಾ ಊಟ, ಆಸರಿ ಬಿಟ್ಟು ಪ್ರಾಣ ಬಿಡ್ತಿ.." ಎಂದು ಪಣ ತೊಟ್ಟ ಅಪ್ಪನ ಮುಂದೆ ಕೊನೆಗೂ ಮಗಳು ತಲೆಯೊಡ್ಡಿದ್ದಳು. ಅವಳ ಬದುಕು ಅಲ್ಲಿಗೆ ಸಂಪೂರ್ಣ ಬೋಳಾಗಿಹೋಯಿತು. ತಂಗಿಯ ಸಂತೋಷಕ್ಕಾಗಿ ಈ ಒಂದು ಸಂಪ್ರದಾಯವನ್ನಾದರೂ ತಡೆಯಬೇಕೆಂದು ಎಣಿಸಿದ್ದ ನರಸಿಂಹ ಜೋಯಿಸರಿಗೆ ಅತೀವ ನಿರಾಸೆ ದುಃಖಗಳಾದವು. ತದನಂತರ ಅವರಿಗೆ ಮೂಕಾಂಬೆಯ ಮೊಗನೋಡುವುದೇ ಕಷ್ಟವಾಗಿ ಹೋಯಿತು. ಅಂತೆಯೇ ಆಕೆಗೂ ಅಣ್ಣನ ನೋವಿನ ಅರಿವಾಗಿ, ಆದಷ್ಟು ಅವರ ಎದುರಿಗೆ ಬರುವುದನ್ನೇ ಕಡಿಮೆ ಮಾಡತೊಡಗಿದಳು. ಅವರಿಬ್ಬರ ಹೆಚ್ಚಿನ ಮಾತುಗಳೆಲ್ಲಾ ಸರಸಮ್ಮನ ಮೂಲಕವೇ ಆಗತೊಡಗಿತು.

ಮುಂದೆ ತವರು ಪಾಲಾದ ಮೂಕಾಂಬೆಯ ಆಸ್ತಿಹೊಡೆಯಲು ಅವಳ ಮೈದುನರು ಸಂಚುಹಾಕುತ್ತಿರುವುದನ್ನರಿತ ಜೋಯಿಸರು ಗಟ್ಟಿ ಮನಸುಮಾಡಿ ತಂಗಿಯನ್ನೂ ಅವಳ ಮಕ್ಕಳನ್ನೂ ಮೂರೂರಿಗೆ ತಂದು ಅವಳ ಮನೆಯಲ್ಲೇ ಬಿಡಬೇಕಾಯಿತು. ಆದರೂ ತಿಂಗಳಲ್ಲೆರಡು ಸಾರಿಯಾದರೂ ಅಲ್ಲಿಗೆ ಹೋಗಿ ಎಲ್ಲಾ ವಿಚಾರಿಸಿಕೊಂಡು ಬರುತ್ತಿದ್ದರು. ತವರು ಮನೆ ಬೆಂಬಲವೊಂದಿಲ್ಲದಿದ್ದರೆ ಅವಳಾಸ್ತಿಯನ್ನು ನುಂಗಿ ನೀರು ಕುಡಿಯುತ್ತಿದ್ದರು ಮೈದುನರು. ಮನೆಯವರ ಅಸಡ್ಡೆಗೆ, ಕೊಂಕು ನುಡಿಗೆ, ತನ್ನ ಮಕ್ಕಳಿಗಾಗುತ್ತಿರುವ ಅನ್ಯಾಯಕ್ಕೆ, ಎಲ್ಲವುದಕ್ಕೂ ಅವಳ ಉತ್ತರ ಬರಿಯ ಮೌನವಾಗಿರುತ್ತಿತ್ತು. ಅಖಂಡ ನಿರ್ಲಿಪ್ತತೆ ಅವಳ ಪಾಲಿಗೆಂದೋ ಒಲಿದಿತ್ತು. ಓದಿನಲ್ಲಿ ಮುಂದಿದ್ದರೂ ಓದಲಾಗದ ಸಂಕಟದ ಜೊತೆಗೆ, ಮನೆಯೊಳಗಿನ ಅಸಮಾನತೆ, ಪಕ್ಷಪಾತಿ ಗುಣಗಳಿಗೆಬೇಸತ್ತು ಬೆಂಗಳೂರನ್ನು ಸೇರಿ, ಯಾವುದೋ ನೌಕರಿ ಹಿಡಿದು, ಅಲ್ಲೇ ಒಂದು ಹುಡುಗಿಯನ್ನು ಮದುವೆಯಾಗಿ ನೆಲೆಸಿದ ಮೊದಲ ಮಗನ ಉದಾಸೀನತೆಗೆ, ತಮ್ಮ ಈ ಪಾಡಿಗೆ ಯಾರು ಹೊಣೆ ಎಂದು ಹುಡುಕುತ್ತಾ ಉತ್ತರ ಸಿಗದೇ ತಾನೇ ಕುದಿದು ಕುದಿದು ಬಡ ತಾಯಿಯ ಮೇಲೆ ಲಾವಾವನ್ನು ಹೊರಹಾಕಿ ದೂರಾದ ಎರಡನೆಯ ಮಗನ ನಿರ್ಲಕ್ಷತನಕ್ಕೂ ಮೂರೂರಜ್ಜಿಯದು ಈಗ ಒಂದೇ ಉತ್ತರ.."ದೇವರ ಹಣೆಯಲ್ಲಿ ಭಗವಂತ ಬರ್ದ ಹಾಂಗೆ ಆಗ್ತು.."
ವರುಷದ ಹಿಂದೆ ಊರಿಗೆ ಹೋಗಿದ್ದಾಗ ಮಾತು ಮಾತಿನ ಮೇಲೆ ಸರಸಮ್ಮ ಪಾವನಿಯಲ್ಲಿ ಹೇಳಿದ್ದರು. "ನಮ್ಮನೆ ಮೂಕಾಂಬೆ ಸ್ಥಿತಿ ನೋಡಿರೆ ಬೇಜಾರಾಗ್ತು ತಂಗಿ.. ಕಷ್ಟ ಪಟ್ಟು ಬೆಳ್ಸಿದ ಮಕ್ಕ ಹತ್ರ ಇಲ್ಲೆ. ಈಗ ಅವು ಮದ್ವೆ ಆಗಿ ಅವ್ರವ್ರ ಸಂಸಾರದಲ್ಲಿದ್ದೋ.. ಪಾಪ ಮೂಕಾಂಬೆ ಮನ್ಸು ಬಂದಾಗ ಇಲ್ಲಿಗೆ ಬಂದ್ಕತ್ತ... ಶ್ರೀಪತಿ ಕಿರಿ ತಮ್ಮನ ಮೊಮ್ಮಕ್ಳ ಆಡ್ಸಕತ್ನ ಇದ್ದು ಬಡ್ವೆ. ಇಲ್ಲೇ ಬಂದಿರು ಅಂದ್ರೂ ಅದ್ಕೆ ಮನಸಿಲ್ಲೆ.."ಇಷ್ಟು ವರ್ಷನೇ ಅಲ್ಲಿದ್ದಾಜು ಅತ್ಗೆ.. ಇನ್ನೆಂತಾ ಅಲ್ಲಿ ಇಲ್ಲಿ.. ಸುಮ್ನೇಯಾ.. ಆ ದೇವ್ರು ಈಗ್ಲಾದ್ರೂ ಅವ್ನಲ್ಲಿಗೇ ಕರ್ಸಕಂಡಿದ್ರೆ ಆರಾಮಾಗಿತ್ತು ನೋಡು.." ಹೇಳ್ತಿ ಕೊರಗತಾ ಇರ್ತು.. ಹ್ಮಂ.. ನೀ ಒಂದ್ಸಲ ಮೂರೂರಿಗೂ ಹೋಗ್ಬಾ. ನಿನ್ನ ರಾಶಿ ಕೇಳ್ತಿರ್ತು. ಸಣ್ಣಕಿರ್ಬೇಕಿದ್ರೆ ನೀನು ಅದ್ರ ಜೊತೆಗೇ ಇರ್ತಿದ್ದೆ ನೆನ್ಪಿಲ್ಯಾ.." ಎನ್ನಲು ಪಾವನಿಯ ಮನಸೆಲ್ಲಾ ಹಳೆ ನೆನಪುಗಳಿಂದ ಹಸಿರಾಗಿತ್ತು. ಮರುದಿವಸವೇ ಆಕೆ ಕುಮ್ಟೆಯ ಬಸ್ಸು ಹತ್ತಿ ಮೂರೂರನ್ನು ಸೇರಿದ್ದಳು.

ಹಿಂದೆ ಹರಿದ್ವರ್ಣ ಮರಗಳಿಂದ, ಹೂವಿನ ಗಂಧ, ಹಕ್ಕಿಗಳಿಂಚರದಿಂದ ನಳನಳಿಸುತ್ತಿದ್ದ ಕಾಡೊಂದು, ಮನುಜನ ಕ್ರೌರ್ಯಕ್ಕೆ ಬಲಿಯಾಗಿ ಬೋಳುಗುಡ್ದೆಯಾದಂತೆ ಕಾಣುತ್ತಿದ್ದ ಬೋಳು ತಲೆ, ಮಾಸಲು ಮಡಿಸೀರೆಯೊಂದನ್ನು ಸುತ್ತಿದ್ದ ಕೃಶ ಶರೀರ, ಗುಳಿ ಬಿದ್ದ ಕಳಾಹೀನ ಕಣ್ಗಳು, ವಯಸ್ಸಿನ ಪ್ರಭಾವದಿಂದಲೋ ಇಲ್ಲಾ ಬದುಕು ಕೊಟ್ಟ ಹೊಡೆತಗಳಿಂದಲೋ ತುಸು ಹೆಚ್ಚೇ ಬಾಗಿದ್ದ ಬೆನ್ನು, ಕಣ್ಣ ಕಿರಿದಾಗಿಸಿ ತನ್ನನ್ನೇ ದಿಟ್ಟಿಸಿ ನೋಡುತ್ತಾ ನಿಂತ ಮೂರೂರಜ್ಜಿಯನ್ನು ಕಂಡ ಪಾವನಿಗೆ ವಿಪರೀತ ಸಂಕಟವಾಯಿತು. ಆದರೆ ಈಗತಾನೇ ಅರಳಿದ ಹೂವಂತೆ ಕಂಗೊಳಿಸುತ್ತಿದ್ದ ಪಾವನಿಯನ್ನು ಅಚಾನಕ್ಕಾಗಿ ಅಲ್ಲಿ ಕಂಡು ಮೂಕಾಂಬೆಯ ಸಂತೋಷ ಹೇಳತೀರದು.

"ಕೂಸೆ, ನಿನ್ನಮ್ಮ ನನ್ನ ತೊಡೆಮೇಲೇ ಬೆಳ್ದಿದ್ದು. ಅತ್ಗೆಗಾದ್ರೂ ಎಲ್ಲಿತ್ತು ಪುರ್ಸೊತ್ತು ಮಕ್ಳ ಆಡ್ಸಲೆ? ಬೆನ್ನಿಗೇ ನಾಲ್ಕೈದು ಮಕ್ಕ ಆಗಿದ್ದ. ನಿನ್ನಾಯಿ ಹೆಚ್ಚಿನ ದಿವ್ಸ ಇದ್ದಿದ್ದು ಮೂರೂರಲ್ಲೇಯಾ.. ಕೇಳು ಬೇಕಿದ್ರೆ.. ಅಂತೂ ನೀನು ಈ ಮೂರೂರಜ್ಜಿ ನೆನ್ಪು ಮಾಡ್ಕಂಡು ಬಂದ್ಯಲಿ.. ಖುಶಿ ಆತು ನೋಡು.. ಈ ಮುದ್ಕಿನಾ ಮಾತಾಡ್ಸವೇ ಇಲ್ಲೆ ಈಗ..."ಎಂದು ಮುಕ್ತವಾಗಿ ನಕ್ಕರೂ ಆ ದನಿಯೊಳಡಗಿದ್ದ ವಿಷಾದ ಪಾವನಿಯನ್ನು ತಾಗಿತ್ತು.

ಬಂದ ನಾಲ್ಕು ದಿನ ಕಳೆದದ್ದೇ ಗೊತ್ತಾಗಿರಲಿಲ್ಲ ಆಕೆಗೆ. ಹೊಸ ಹುರುಪು ಬಂದಂತೆ ಮೂಕಾಂಬೆ ತನ್ನೂರನ್ನು ಸುತ್ತಿಸಿದ್ದಳು. ಅಪರೂಪವಾಗಿದ್ದ ತನ್ನ ಸ್ವಂತ ಮೊಮ್ಮಕ್ಕಳನ್ನು ಬಹುಶಃ ಪಾವನಿಯಲ್ಲಿ ಕಂಡಿದ್ದಿರಬೇಕು ಆ ಜೀವಿ. ಮೊದಮೊದಲು ತಂದೆಯೊಂದಿಗೆ ವರುಷಕ್ಕೊಮ್ಮೆಯಾದರೂ ಬರುತ್ತಿದ್ದ ಮೊಮ್ಮಕ್ಕಳು ಈಗ ತಮ್ಮ ಹೆತ್ತವರನ್ನು ಕೆಳುಹಿಸಿಕೊಟ್ಟೇ ದೊಡ್ಡುಪಕಾರ ಮಾಡುತ್ತಿದ್ದಂತಿತ್ತು. ಆಕೆಯ ಉತ್ಸಾಹ, ಸಂತೋಷ ಕಂಡು ಹಿಂತಿರುಗುವ ಅವಸರವನ್ನು ಮತ್ತೂ ಮೂರುದಿನಕ್ಕೆ ಮುಂದೂಡಿದ್ದಳು ಪಾವನಿ.

ಅಂದೂ ಹಾಗೆಯೇ ಹೊರೆಗೆ ಭೋರೆಂದು ಮಳೆ ಸುರಿಯುತ್ತಿದ್ದರೆ ಮೂರೂರಜ್ಜಿ ಬಿಸಿಬಿಸಿ ಹಲಸಿನಕಾಯಿ ಸೊಳೆ ಕರಿದು ತಂದಿಟ್ಟಿದ್ದಳು. ಬಟ್ಟಲು ತುಂಬಾ ತಿಂಡಿಯಿದ್ದರೂ ಒಂದೊಂದೇ ತಿನ್ನುತ್ತಾ ಅದೇನನ್ನೋ ಕಿವೊಯೊಳಗಿಟ್ಟುಕೊಂಡು ಗುನುಗುತ್ತಿದ್ದ ಪಾವನಿಯನ್ನು ನೋಡಿ ಮೋಜೆನಿಸಿತ್ತು ಮೂರೂರಜ್ಜಿಗೆ.
"ಕೂಸೆ ಎಂತದೇ ಅದು.. ಕೆಮಿ ಸರಿ ಕೇಳ್ಸದೇ ಹೋದವು ಹಾಕ್ಕಂಬಥಾ ವಸ್ತುನಾ ಇಟ್ಕಂಜೆ....?" ಎಂದು ಆಕೆಯನ್ನು ಕೇಳಿದಾಗ ಪಾವನಿಗೆ ನಗೆಯುಕ್ಕಿ ಬಂದಿತ್ತು.
"ಅಜ್ಜಿ ಇದು ಅದಲ್ಲ.. ಇದಕ್ಕೆ ಎಂ.ಪಿ. ತ್ರೀ ಹೇಳ್ತೋ.. ಇದ್ರಲ್ಲಿ ಚೊಲೋ ಚೊಲೋ ಹಾಡಿದ್ದು. ಈ ದಾರಾನ ಕಿವಿಗಿಟ್ಕಂಡ್ರೆ ಕೇಳ್ತು.." ಎಂದಾಗ ಆಕೆಗೆ ಅರ್ಥವೇ ಆಗಿರಲಿಲ್ಲ.
"ಎಂಥಾ ಸುಡಗಾಡೋ.. ಬಿಸಿ ಆರೋಗ್ತು ಮೊದ್ಲು ಇದ್ನ ತಿನ್ನು.. ಅಮೇಲೆ ಕೇಳ್ಲಕ್ಕು... ಅದ್ರಲ್ಲಿ ಎಲ್ಲಾ ಹಾಡೂ ಬತ್ತಾ? ಭಜನೆ ಎಲ್ಲಾ ಬತ್ತಾ?"ಎಂದು ಮುಗ್ಧವಾಗಿ ಪ್ರಶ್ನಿಸಲು ಪಾವನಿ.."ಅಜ್ಜಿ ಸದ್ಯಕ್ಕೆ ಇದ್ರಲ್ಲಿ ಭಾವಗೀತೆಗಳಿದ್ದು. ಅದ್ನೇ ಕೇಳ್ತಾ ಇದ್ದಿದ್ದಿ. ತಡಿ..ಕೊಡ್ತಿ..ಕೇಳು.."ಎನ್ನುತ್ತಾ ಆಕೆಯ ಕಿವಿಗಿಟ್ಟಿದ್ದಳು.
ಹಾಡು ಪ್ರಾರಂಭವಾಗಿ ಮುಗಿಯುವ ತನಕವೂ ಬಿಮ್ಮನೆ ಕುಳಿತಿದ್ದ ಮೂರೂರಜ್ಜಿಯ ಕಣ್ಣ ತುಂಬೆಲ್ಲಾ ನೀರು ತುಂಬಿತ್ತು. "ಕೂಸೆ ಈ ಹಾಡು ರಾಶಿ ಚೊಲೋ ಇದ್ದು.. ನಿಂಗೆ ಬರ್ತಾ ಹಾಡಲೆ? ಎಷ್ಟು ಚೊಲೋ ಹಾಡಿದ್ದು ಅದು.. ಈ ಹಾಡಿನಾಂಗೇಯಾ ನನ್ನ ಬದ್ಕೂವಾ ಅನಿಸ್ತಾ ಇದ್ದು ನೋಡು.. "ಎನ್ನಲು ಯಾವ ಹಾಡು ಬರುತ್ತಿತ್ತಪ್ಪಾ ಎಂಡು ರೆವೈಂಡ್ ಮಾಡಿ ಕೇಳಿದ್ದಳು ಪಾವನಿ.

ಬೇಸರದ ಬಯಲಿನಲಿ ಬೋಳು ಮರ ಕರೆಯುತಿದೆ
ಬನ್ನಿ ನನ್ನೆಲೆಗಳೆ ಶಿಶಿರದಲ್ಲಿ
ಕಳುಹಿಸಿದ ಪತ್ರಗಳು ತಲುಪುದಿವೋ ಇಲ್ಲವೋ
ಎಲ್ಲಿ ಗುರಿ ತಪ್ಪಿದವೋ ಇರುಳಿನಲ್ಲಿ....

ಹೊರಗೆ ಬಿರುಮಳೆ, ಒಳಗೆ ಅಜ್ಜಿಯ ಕಣ್ಣೀರು, ಕಿವಿಯೊಳಗೆಲ್ಲಾ ಹಾಡಿನ ಮೊರೆತ... ವಿಚಿತ್ರ ಸಂಕಟವಾಗಿತ್ತು ಪಾವನಿಗೆ. ಅಪ್ರಯತ್ನವಾಗಿ ಆಕೆಯ ಕೆನ್ನೆಗಳೂ ಒದ್ದೆಯಾಗಿದ್ದವು.

"ಅಯ್ಯೋ ನನ್ನ ಮಳ್ಳೇ.. ಅಪ್ರೂಪಕ್ಕೆ ಬಂದ ನಿನ್ನ ಅಳ್ಸಿದೆ. ಬೇಜಾರಾಗಡ ತಂಗಿ. ಎಂತೋ ನೆನ್ಪಾತು.. ಹೋತು. ಬಿಟ್ಬುಡು. ಹಾಂ.. ಅದೆಂತದೋ ಸುಡುಗಾಡು ಹೆಸ್ರು ಅಂದ್ಯಲೆ ಇದ್ಕೆ? ನಂಗೆ ಇದ್ನ ನೋಡಿ ಅಣ್ಣಯ್ಯ ಮೊದ್ಲನೇ ಬಾರಿ ರೇಡ್ಯೋ ತಂದ ನೆನ್ಪಾತು ನೋಡು.."ಎಂದಾಗ ಇಬ್ಬರ ಕಣ್ಗಳೂ ಮಿನುಗಿದ್ದವು.
"ಎಂತಾ ಎಡವಟ್ಟಾಗಿತ್ತು ಅಜ್ಜಿ? ಅಜ್ಜ ತಂದ ರೇಡಿಯೋ ಸರಿ ಇತ್ತಿಲ್ಯ?"
"ಕೇಳು ಕೂಸೆ.. ಆಗಿನ ಕಾಲ್ದಲ್ಲಿ ರೇಡಿಯೋ ಇಟ್ಕಂಬದೇ ದೊಡ್ಡ ಪ್ರತಿಷ್ಠೆ ಆಗಿತ್ತಾ.. ಅಣ್ಣಯ್ಯನೂ ಮನಿಗೆ ತಂದ ರೇಡಿಯೋ. ಆದ್ರೆ ಆಗೆಲ್ಲಾ ಆ ಮೂಲೆ ಊರಿಗೆ ಸರಿಯಾಗಿ ಎಲ್ಲಿ ದನಿ ಬರ್ತಿತ್ತು ಹೇಳು? ಒಂದಿನ ರ‍ೇಡ್ಯೋ ಕೇಳಿದ್ರೆ ಮರ್ದಿನ ಕೇಳ್ತಿತ್ತಿಲ್ಲೆ.. ಅಣ್ಣಯ್ಯಂಗೆ ತಲೆ ಬಿಸಿ ಆತು. ಒಂದಿನ ಕುಪ್ಪಾ ಭಟ್ರ ಮನೆಗೆ ಹೋಗಿ ಅವ್ರ ಮಗ್ನ ಎಂತ ವಿಷ್ಯ ಕೇಳ್ದಾ? ಅಂವ ದೊಡ್ಡೂರಲ್ಲಿ ಓದಿ ಬಂದವ. ಅವಂಗೆಲ್ಲಾ ಗೊತ್ತಿರ್ತು ಹೇಳಿ. ಆ ಮಾಣಿ ಅಣ್ಣಯ್ಯನ್ನ ತಮಾಷೆ ಮಾಡವು ಹೇಳಿ.."ಜೋಯ್ಸ್ರೆ.. ಅದು ‘ಸಿಗಿನೆಲ್ಲು’ ನಿಮ್ಮಲ್ಲಿಗೆ ಬಪ್ಪಲೆ ನಮ್ಮನೆ ಗೊಬ್ರದಗುಂಡಿ ದಾಟಿ ಬರವಲ್ರಾ.. ಅದ್ಕೇ ಲೇಟಾಗ್ತು.. ಅದೂ ಅಲ್ದೇ ಕೆರೆ ಬದಿ ಶಿವ ಭಟ್ರ ಮನೆ ಏರಿ ಬೇರೆ ಹತ್ತಿ ಬರವು.. ಹಾಂಗಾಗಿ ನಿಮ್ಗೆ ಸರಿ ಬತ್ತಿಲ್ಲೆ ಕಾಣ್ತು.." ಹೇಳಿ ಕಳ್ಸದ. ಆಮೇಲೆ ಗೊತ್ತಾತು ನೋಡು ಅಂವ ಮಳ್ಳು ಮಾಡಿದ್ದ ಅಣ್ಣಯ್ಯನ ಹೇಳಿ.. ಗೊತ್ತಾದಾಗ ಅಣ್ಣಯ್ಯಂಗೆ ರಾಶಿ ಸಿಟ್ಟು ಬಂದಿತ್ತು.. ಎರ್ಡು ತಾಸು ಹಾರಾಡಿದ್ದ.." ಎಂದು ನಗಲು, ಆ ನಗು ಪಾವನಿಯ ಮೊಗವನ್ನು ಸೇರಿತ್ತು. ವಾರವಿಡೀ ತನ್ನ ಮೂರೂರಜ್ಜಿಯ ಬೆನ್ನಿಗಂಟಿಕೊಂಡೇ ಕಳೆದ ಪಾವನಿ ಬೆಂಗಳೂರಿಗೆ ಹಿಂತಿರುಗುವಾಗ ಮಧುರ ನೆನಪುಗಳ ಮೂಟೆಯನ್ನೇ ಹೊತ್ತೊಯ್ದಿದ್ದಳು.

ಹಳೆಯ ನೆನಪುಗಳನ್ನು ಮೆಲುಕುತ್ತಾ, ಕಾರಂತರ ಮೂಕಜ್ಜಿಯ ಕನಸುಗಳನ್ನು ಕಾಣುತ್ತಾ, ಮೆಲುವಾಗಿ ಸಿ.ಡಿ.ಪ್ಲೇಯರ್‌ನಿಂದ ಹೊರ ಹೊಮ್ಮುತ್ತಿದ್ದ ಭಾವಗೀತೆಯನ್ನು ಆಲಿಸುತ್ತಾ ಮೈಮರೆತಿದ್ದ ಪಾವನಿಯನ್ನೆಬ್ಬಿಸಿದ್ದು ಆಕೆಯ ಮೊಬೈಲ್ ರಿಂಗ್.
"ಪಾವನಿ ನಾನು ಶಂಕ್ರಮಾವ.. ಮೂರೂರತ್ತೆಗೆ ಹಾರ್ಟ್ ಅಟ್ಯಾಕ್ ಆಗಿ ಎರ್ಡುತಾಸಿನ ಹಿಂದೆ ಹೋಗೋತಡ ಮಾರಾಯ್ತಿ..ಲ್ಯಾಂಡ್‍ಲೈನಿಗೆ ಟ್ರೈ ಮಾಡಿಟ್ಟಿ.. ಹೋಜಿಲ್ಲೆ.. ಅಮ್ಮಂಗೆ ಹೇಳ್ಬುಡು. ನಾ ಅರ್ಜೆಂಟ್ ಮೂರೂರಿಗೆ ಹೊರ್ಟಿದ್ದಿ.." ಎಂದು ಕಟ್ ಮಾಡಲು ಆಕೆಯ ಮಡಿಲಲ್ಲಿದ್ದ "ಮೂಕಜ್ಜಿಯ ಕನಸುಗಳು" ಕೆಳಗೆ ಬಿತ್ತು. ಪ್ಲೇಯರ್ -
ಮರದ ಬುಡವನು ಕೊಡಲಿ
ಕಡಿವ ಮೊದಲೇ ಬನ್ನಿ.....
ತಾಯಿ ಬೇರಿನ ತವರ ದಾರಿ ಹಿಡಿದು...
ಬೇಸರದ ಬಯಲಿನಲಿ ಬೋಳು ಮರ ಕರೆಯುತಿದೆ.. - ಹಾಡನ್ನು ಹಾಡತ್ತಲೇ ಇತ್ತು.
(ಕನ್ನಡ ಪ್ರಭ ಪತ್ರಿಕೆಯ ಸಾಪ್ತಾಹಿಕ ಪ್ರಭ ವಿಭಾಗದಲ್ಲಿ ಪ್ರಕಟಿತ)
-ತೇಜಸ್ವಿನಿ ಹೆಗಡೆ

----****----


RSS

ekaviNadeduBandaDaari

ಎಲ್ಲಾ ಕನ್ನಡ ಅಭಿಮಾನಿಗಳ ಅಂತರರಾಷ್ಟೀಯ ವೇದಿಕೆ – ಈಕವಿ ಕನ್ನಡ ಕನ್ನಡಿಗ ಕನ್ನಡಿಗರು ಕರ್ನಾಟಕ ಬನ್ನಿ ಎಲ್ಲಾ ಕನ್ನಡಿಗರು ಒಂದಾಗಿ ಕನ್ನಡ ಕೆಲಸಕ್ಕೆ ಮುಂದಾಗೋಣ… ಎಲ್ಲ ಕನ್ನಡ ಮನಸ್ಸುಗಳನ್ನ ಬೆಸೆಯುವ ಒಂದು ಕನ್ನಡಪರ ಪ್ರಗತಿಪರ ಮನಸ್ಸುಗಳ ಮಿಲನದ ಹೂರಣ ಕನ್ನಡವೇ ಜಾತಿ   ಕನ್ನಡವೇ ಧರ್ಮ ELLA KANNADA ABHIMAANIGALA VEDIKE INTERNATIONAL – EKAVI    ಈಕವಿ ನೆಡೆದು ಬಂದ ಹಾದಿ ಆತ್ಮೀಯ ಕನ್ನಡಿಗರೆ, ಕರ್ನಾಟಕ ಮತ್ತು ಕನ್ನಡದ ಇಂದಿನ ದುಃಸ್ಥಿತಿಯ ಅರಿವು ತಮಗೆ ಇದ್ದೇ ಇದೆ. ಅನ್ಯ ರಾಜ್ಯಗಳ ಜನಗಳು ವಲಸೆ ಬಂದು ಇಲ್ಲಿ ತಮ್ಮದೇ ಭಾಷೆ [...]

PRESS RELEASE of ekavi of Inaguration October 4th 2003

ಎಲ್ಲಾ ಕನ್ನಡ ಅಭಿಮಾನಿಗಳ ಅಂತರರಾಷ್ಟೀಯ ವೇದಿಕೆ – ಈಕವಿ  ಕನ್ನಡ ಕನ್ನಡಿಗ ಕನ್ನಡಿಗರು ಕರ್ನಾಟಕ ಬನ್ನಿ ಎಲ್ಲಾ ಕನ್ನಡಿಗರು ಒಂದಾಗಿ ಕನ್ನಡ ಕೆಲಸಕ್ಕೆ ಮುಂದಾಗೋಣ… ಎಲ್ಲ ಕನ್ನಡ ಮನಸ್ಸುಗಳನ್ನ ಬೆಸೆಯುವ ಒಂದು ಕನ್ನಡಪರ ಪ್ರಗತಿಪರ ಮನಸ್ಸುಗಳ ಮಿಲನದ ಹೂರಣ ಕನ್ನಡವೇ ಜಾತಿ   ಕನ್ನಡವೇ ಧರ್ಮ ELLA KANNADA ABHIMAANIGALA VEDIKE INTERNATIONAL – EKAVI   For your information: Press Release FOR IMMEDIATE RELEASE IRVINE, CALIFORNIA, USA – Kannadigas are extremely happy and proud that celebrated famous author and dramatist, Former [...]

EKAVI is a Total Kannada Organization

EKAVI is a Total Kannada Organization   EKAVI NETWORK  of KANNADIGAS all over the world ಎಲ್ಲಾದರು ಇರು ಎಂತಾದರು ಇರು ಎಂದೆಂದಿಗು ನೀ ಕನ್ನಡವಾಗಿರು ಎಲ್ಲಾ ಕನ್ನಡ ಅಭಿಮಾನಿಗಳ ಅಂತರರಾಷ್ಟೀಯ ವೇದಿಕೆ – ಈಕವಿ ಬನ್ನಿ ಎಲ್ಲಾ ಕನ್ನಡಿಗರು ಒಂದಾಗಿ ಕನ್ನಡ ಕೆಲಸಕ್ಕೆ ಮುಂದಾಗೋಣ…   Make your friends to join EKAVI for KANNADA cause. Become a Committee person to handle issues. Take your friends to the EKAVI meeting. EKAVI is an International Kannada Vedike [...]

ekavi Meeting and Directions

ಎಲ್ಲಾ ಕನ್ನಡ ಅಭಿಮಾನಿಗಳ ಅಂತರರಾಷ್ಟೀಯ ವೇದಿಕೆ – ಈಕವಿ ಕನ್ನಡ ಕನ್ನಡಿಗ ಕನ್ನಡಿಗರು ಕರ್ನಾಟಕ ಬನ್ನಿ ಎಲ್ಲಾ ಕನ್ನಡಿಗರು ಒಂದಾಗಿ ಕನ್ನಡ ಕೆಲಸಕ್ಕೆ ಮುಂದಾಗೋಣ… ಎಲ್ಲ ಕನ್ನಡ ಮನಸ್ಸುಗಳನ್ನ ಬೆಸೆಯುವ ಒಂದು ಕನ್ನಡಪರ ಪ್ರಗತಿಪರ ಮನಸ್ಸುಗಳ ಮಿಲನದ ಹೂರಣ ಕನ್ನಡವೇ ಜಾತಿ   ಕನ್ನಡವೇ ಧರ್ಮ ELLA KANNADA ABHIMAANIGALA VEDIKE INTERNATIONAL – EKAVI     ಈಕವಿ ಸಭೆ, ಬೆಂಗಳೂರು ನಲ್ಲಿ , ರವಿವಾರ , ಅಕ್ಟೋಬರ್ ೪ ೨೦೦೯ , ೪ ಗಂಟೆಗೆ ಇದೆ.   ಸಭೆ ನಡೆಯುವ ವಿಳಾಸ: 12, ಸುಮೇರು, ಸರ್ ಎಂ. ಏನ್. ಕೃಷ್ಣರಾವ್ ರಸ್ತೆ. ಬಸವನಗುಡಿ, ಬೆಂಗಳೂರು 560004. __________________   EKAVI [...]

NIMMA JILLEGE ekavi jothe serikondu SAHAYA maadi

ಈಕವಿ ಸಂಸ್ಥೆ ಯು ಇದುವರೆಗೂ ವಿವಿದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ೨೦೦೩ ರರಿಂದ ಇಂದಿನವರೆಗೂ ಕನ್ನಡಕ್ಕಾಗಿ ಸೇವೆ , ಕನ್ನಡಿಗರಿಗೆ ಸಹಾಯ, ಮಾಡುತ್ತಾ ಬಂದಿದೆ. ಆದ್ದರಿಂದ ಆಸಕ್ತಿ ಇರುವ ವಿದ್ಯಾವಂತ ಯುವಕ ಯುವತಿಯರಿಗೆ ತಮ್ಮ  ತಮ್ಮ ಜಿಲ್ಲೆ, ತಾಲ್ಲೂಕು, ಹಳ್ಳಿ, ಹೋಬಳಿಗಳಿಗೆ ಏನಾದರು ಸೇವೆ ಸಲ್ಲಿಸುವ ಆಸಕ್ತಿ ಇರುವವರನ್ನು ಪ್ರೋತ್ಸಾಹಿಸಲು ಈ-ಕವಿ ವೇದಿಕೆಯು ಸಜ್ಜಿಸಲಾಗಿದೆ.   ಬೆಂಗಳೂರಿನಲ್ಲಿ, ಹೊರರಾಜ್ಯದಲ್ಲಿ ಮತ್ತು ಹೊರದೇಶದಲ್ಲಿ ವಾಸಿಸುತ್ತಿರುವ ಕನ್ನಡಿಗರಿಗೆ ತಮ್ಮ ತಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ, ಹಳ್ಳಿಗಳ ಬಗ್ಗೆ ಚಿಂತಿಸಿ, ತನ್ನನ್ನು ಬೆಳೆಸಿದ ಊರಿಗೆ ಸಹಾ [...]

Requesting VASU to put BARAHA into OPEN SOURCE, Answer to Dr. Pavanaja’s email,

Requesting VASU to put BARAHA into OPEN SOURCE, Answer to Dr. Pavanaja’s email, Answer to some of the questions raised here in the email. Dear Mr. Sheshadrivasu Chandrasekharan,   At the out set, I would like to write that our kannada association HONORED you in Southern California during the SILVER JUBLIEE CELEBRATIONS for your kannada fonts BARAHA.  I [...]

VASU BARAHA kaddu maadiddu 1997 nalli. ROOPISIDDU antha yaake helabeku?

ರಾಜ್ಯ ವಾರ್ತೆ – ತುಮಕೂರು   ಕನ್ನಡಕ್ಕೆ ಅನ್ವಯಿಕ  ತಂತ್ರಾಂಶ ಅಗತ್ಯ [Kannada Software - VASU June 2009.pdf (application/pdf) 409.00K] ಕನ್ನಡ ಪ್ರಭ ವಾರ್ತೆ , ತುಮಕೂರು , ಜೂನ್ ೧೫ ೨೦೦೯,   ಕನ್ನಡ ಭಾಷಾ ತಂತ್ರಾಂಶ ಗಳಲ್ಲಿ ಬಹುತೇಕ ತಾಂತ್ರಿಕ (ಸಾಫ್ಟ್ ವೇರ್ ಗಳಲ್ಲಿ ) ಸಮಸ್ಯೆಗಳು ಬಗೆಹರಿದಿವೆ. ಆದರೆ ಇಂಗ್ಲಿಷ್ ಭಾಷಾ ತಂತ್ರಾಂಶ ಗಳಲ್ಲಿ ರುವಂತೆ  ಕನ್ನಡದಲ್ಲೂ ವಿವಿದ ರೀತಿಯ ಅನ್ವಯಿಕ ತಂತ್ರಾಂಶ (ಅಪ್ಲಿಕೇಶನ್) ಗಳನ್ನೂ ರೂಪಿಸಬೇಕಾದ ಅಗತ್ಯವಿದೆ ಎಂದು ಉಚಿತ ಕನ್ನಡ ತಂತ್ರಾಂಶ ಬರಹದ ರೂವಾರಿ ಅಮೇರಿಕಾದ [...]

New Law needed to Protect Witnesses – Pro-whistle blower laws need to be enacted – Corruption in India is a mega industry to which public exposés are no match.

From: eGov INDIA <egovindia@gmail.com> Subject: New Law needed to Protect Witnesses – Pro-whistle blower laws need to be enacted – Corruption in India is a mega industry to which public exposés are no match. To: vnathan@nic.in Cc: “Additional Secretary Legislative DepartmentShri N.L. Meena” <nlm.ld@nic.in>, “Additional Secretary Legislative DepartmentShri V. K. Bhasin” <vkb@nic.in>, “Joint Secretary & Legislative Counsel Legislative [...]

ekavi had proposed to GoK in 2004 for Kannada Software Development

ಎಲ್ಲಾ ಕನ್ನಡ ಅಭಿಮಾನಿಗಳ ಅಂತರರಾಷ್ಟೀಯ ವೇದಿಕೆ – ಈಕವಿ ಕನ್ನಡ ಕನ್ನಡಿಗ ಕನ್ನಡಿಗರು ಕರ್ನಾಟಕ ಬನ್ನಿ ಎಲ್ಲಾ ಕನ್ನಡಿಗರು ಒಂದಾಗಿ ಕನ್ನಡ ಕೆಲಸಕ್ಕೆ ಮುಂದಾಗೋಣ… ಎಲ್ಲ ಕನ್ನಡ ಮನಸ್ಸುಗಳನ್ನ ಬೆಸೆಯುವ ಒಂದು ಕನ್ನಡಪರ ಪ್ರಗತಿಪರ ಮನಸ್ಸುಗಳ ಮಿಲನದ ಹೂರಣ ಕನ್ನಡವೇ ಜಾತಿ   ಕನ್ನಡವೇ ಧರ್ಮ ELLA KANNADA ABHIMAANIGALA VEDIKE INTERNATIONAL – EKAVI     EKAVI had proposed this in 2004 to GoK – in KANNADA and ENGLISH. What EKAVI had proposed in 2004 is in this [...]

Govt. School at Keradi, Kundapura Tq, Udupi Jille

ಈಕವಿ ಸರ್ಕಾರಿ ಕೆರಾಡಿ ಶಾಲಾ ದತ್ತು ತೆಗೆದುಕೊಂಡಿದೆ.   ಉಡುಪಿ ಜಿಲ್ಲಾ ಪಂಚಯಾತ್ ಹಿರಿಯ ಪ್ರಾಥಮಿಕ ಶಾಲೆ, ಕೆರಾಡಿ ಕುಂದಾಪುರ ತಾಲ್ಲೂಕು , ಉಡುಪಿ ಜಿಲ್ಲೆ, ೫೭೬೨೩೩     Date : August 8th 2009   Time : 11:00 AM   class 1 to 4 no of students :: 85 to provide :: pencil,eraser,scale,sharpner, sketch pen, class 5 to 8 no of students :: 120 to provide :: Geometry Box Scholarship for class 8,7,6,5 toppers.     ಧನ್ಯವಾದಗಳೊಂದಿಗೆ, ಈ-ಕವಿ ಕುಂದಾಪುರ   AVINAV, Ravindra Nayak, Sandhya [...]
 
 

About

KARNATAKA KANNADA KARNATAKA KANNADA created this social network on Ning.

Create your own social network!

Forum

Dr.Raju Krishna Bhat

ನಾನು ಓದಿದ ಕನ್ನಡ ಪುಸ್ತಕ. 9 Replies

Started by Dr.Raju Krishna Bhat in Uncategorized. Last reply by venkatakrishna.kk Nov 19.

Dr.Raju Krishna Bhat

ಪರ್ವ ಓದಿದ್ದಿರಾ? 4 Replies

Started by Dr.Raju Krishna Bhat in Uncategorized. Last reply by RAJENDRA PAVAGADA Oct 31.

KARNATAKA KANNADA

DASARA 2009 LIVESTREAMING

Started by KARNATAKA KANNADA in Sample Title Sep 28.

KARNATAKA KANNADA

DASARA 2009 LIVESTREAMING

Started by KARNATAKA KANNADA in Sample Title Sep 28.

KARNATAKA KANNADA

I am a Kannadiga first, I am an Indian next,

Started by KARNATAKA KANNADA in Sample Title Aug 10.

KARNATAKA KANNADA

shaala makkalige nimma sahaya beku

Started by KARNATAKA KANNADA in Sample Title Aug 5.

KARNATAKA KANNADA

Kannada At The Crossroads - It’s judgment time 1 Reply

Started by KARNATAKA KANNADA in Sample Title. Last reply by Sudarshan(Sudhi) Aug 2.

KARNATAKA KANNADA

29 mattu 177_NETWORK of DISTRICTS and TAALOKUGALU

Started by KARNATAKA KANNADA in Sample Title Aug 1.

KARNATAKA KANNADA

NETWORK of KANNADIGAS in DIFFERENT COUNTRIES

Started by KARNATAKA KANNADA in Sample Title Aug 1.

KARNATAKA KANNADA

‘ಕಂಪ್ಯೂಟರ್ ಕೊಂಡ ಮೊದಲ ಕನ್ನಡ ಸಾಹಿತಿ’ 1 Reply

Started by KARNATAKA KANNADA in Sample Title. Last reply by Dr.Raju Krishna Bhat Jul 26.

Sudarshan(Sudhi)

kannada chitra ranga hididiruva daari? 1 Reply

Started by Sudarshan(Sudhi) in Uncategorized. Last reply by Dr.Raju Krishna Bhat Jul 24.

Notes

ಕಂಪ್ಯೂಟರ್ ಶಿಕ್ಷಣ ಕಾರ್ಯಕ್ರಮದ ಬಗ್ಗೆ ಚರ್ಚಿಸಲು ಈ ಸಭೆಯ ಪ್ರಸ್ತಾಪ.'

ನಮಸ್ಕಾರ!
ನಮ್ಮ ಯೋಜನೆಯಂತೆ ನಾವು ಮುಂದಿನ ವಾರ ಕಂಪ್ಯೂಟರ್ ಶಿಕ್ಷಣ ಕಾರ್ಯಕ್ರಮದ ಬಗ್ಗೆ ಚರ್ಚಿಸಲು ಈ ಸಭೆಯ ಪ್ರಸ್ತಾಪ.
ಈ ಶನಿವಾರ ಸಂಜೆ ೪:೦೦ ಘಂಟೆಗೆ ನಾವು ಭೇಟಿ ಮಾಡಿ ಚರ್ಚೆ ಮಾಡಬಹುದು. ದಯವಿಟ್ಟು ಈ ಸಮಯ ತೊಂದರೆಯಾದಲ್ಲಿ ತಿಳಿಸಿ.
ಸಭೆಯು ನಡೆಯುವ ಸ್ಥಳವನ್ನು ಶೀಘ್ರದಲ್ಲೇ ಪತ್ರ ಬರೆದು ತಿಳಿಸುತ್ತೇನೆ.

ಸಭೆಯಲ್ಲಿ ಚರ್ಚಿಸಬಹುದಾದ ಅಂಶಗಳು:
೧. ಯೋಜನೆಯ ನೀಲನಕ್ಷೆ
೨. ಆಯ್ಕೆ ಮಾಡಬೇಕಾದ ಶಾಲೆಗಳು
೩. ಬೇಕಾಗುವಂತಹ ಸ್ವಯಂ ಸೇವಕರ ಸಂಖ್ಯೆ, ಅವರ ಅನುಕೂಲತೆಗಳು.
೪. ಶಾಲೆಗಳ ವ್ಯಾಪ್ತಿ, ಯೋಜನೆಯ ಒಟ್ಟು ಅವಧಿ.
ನಿಮ್ಮ ಅನಿಸಿಕೆಗಳನ್ನು ತಿಳಿಸಿ. ಹಾಗೆ

Continue

Created by KARNATAKA KANNADA Jun 7, 2009 at 2:08pm. Last updated by KARNATAKA KANNADA Jun 7.

Notes Home

Welcome! To view all notes, click here. Continue

Created by KARNATAKA KANNADA Jun 7, 2009 at 9:19am. Last updated by KARNATAKA KANNADA Jun 7.

ಕನ್ನಡದಲ್ಲಿ ಕ್ರಾಂತಿ ಆಗಿರುವುದು ಏನೆಂದರೆ ಕದ್ದು ಮಾಡಿರುವ ಕನ್ನಡ ತಂತ್ರಾಂಶಗಳು.

ಕನ್ನಡದಲ್ಲಿ ಕ್ರಾಂತಿ ಆಗಿರುವುದು ಏನೆಂದರೆ ಕದ್ದು ಮಾಡಿರುವ ಕನ್ನಡ ತಂತ್ರಾಂಶಗಳು.
ವಾಸು ಬರಹ ಕದ್ದು ಮಾಡಿ ಎಲ್ಲರಿಗು ಉಚಿತವಾಗಿ ಕೊಡುವುದೇ ಒಂದು ಕನ್ನಡದ ಕ್ರಾಂತಿ.
ಕನ್ನಡ ಗಣಕ ಪರಿಷತ್ ನವರು ನುಡಿ ತಂತ್ರಾಂಶವನ್ನು ಬರಹ ದಿಂದ ಕದ್ದು ಮಾಡಿ,
ಕರ್ನಾಟಕ ಸರ್ಕಾರ ದಿಂದ ದುಡ್ಡು ಪಡೆದು ಮಾರಿರುವುದೇ ಒಂದು ಕನ್ನಡ ಕ್ರಾಂತಿ ಯಾಗಿದೆ.
ಕನ್ನಡ ಗಣಕ ಪರಿಷತ್, ಕನ್ನಡ ತಂತ್ರಾಂಶ ವನ್ನು , ಕರ್ನಾಟಕ ಸರ್ಕಾರದಲ್ಲಿ ತಪ್ಪು ದಾರಿಗೆ ಎಳೆದು , ಒಂದು ಕ್ರಾಂತಿಯನ್ನೇ ಮಾಡಿದ್ದರೆ.
ಬರಹ ಮತ್ತು ನುಡಿ ತಂತ್ರಾಂಶಗಳು, ಕನ್ನಡ ಭಾಷೆ, ಕರ್ನಾಟಕ ಸರ್ಕಾರದಲ್ಲಿ, ಆಡಳಿತ ಭಾಷೆ ಆಗುವುದಕ್ಕೆ ಎಲ್ಲ ಕಷ್ಟಗಳನ್ನು ತಂದಿವೆ.

RSS

ಎಲ್ಲದಕು ಕಾರಣನು ಈ ಯಡಿಯೂರಪ್ಪ!

’ಪದ್ಮಪ್ರಿಯ ಅಮ್ಮೋರು ಸಿಕ್ಕೋರಂತೆ!’ ಎಂದು ತಿಮ್ಮಕ್ಕ ಜಗುಲಿ ಗುಡಿಸುತ್ತ ಆಶ್ಚರ್ಯ ತೋರಿಸಿದ್ದನ್ನು ನಾನು ಅದೊಂದು ಪ್ರಶ್ನೆಯೋ ಅಥವಾ ವಿಶ್ಲೇಷಣೆಯೋ ಎಂದು ಆಲೋಚಿಸುತ್ತಾ ಏನು ಉತ್ತರ ಹೇಳಲಿ ಎಂದು ಗೊಂದಲದಲ್ಲಿದ್ದಾಗ ನನ್ನ ಸಹಾಯಕ್ಕೆ ಬಂದವನು ನಂಜ.’ತಾಯೀ, ಕೆಲ್ಸಾ ನೋಡು. ಆವಮ್ಮಾ ಯಾರ್ನೋ ಕೂಡಿಕ್ಯಂಡ್ ಗುಳೇ ಬಿದ್ದು ಹೋಗ್ಯಾಳೆ, ಅವಳು ಸಿಕ್ರೆಷ್ಟು ಬಿಟ್ರೆಷ್ಟು!’ ಎಂದು ನಂಜ ಹಂಗಿಸಿದ್ದನ್ನು ಕೇಳಿ ತನ್ನ ಕೈಲಿದ್ದ ಪೊರಕೆಯನ್ನು ಅಲ್ಲೇ ಬಿಸಾಡಿ ಸೆರಗಿನ ತುದಿಯನ್ನು ಸೊಂಟಕ್ಕೆ

ನೂರಾ ಹತ್ತು ಜನ ನೂರಾ ಹತ್ತು ಮಂತ್ರಿಗಳು!

’ಏನ್ ಮೇಷ್ಟ್ರೇ ಇತ್ಲಾಗೆ ಯಡಿಯೂರಪ್ಪ ಅಧಿಕಾರ ಹಿಡ್ದಿದ್ದೇ ತಡಾ ನೀವು ಟ್ರಂಕಿನ್ಯಾಗ್ ಇದ್ದ ಹಳೇ ರೇಷ್ಮೆ ಜುಬ್ಬಾ ತೆಕ್ಕೊಂಡು ಹಾಕ್ಕೊಂಡಿರೋ ಹಾಗಿದೆಯೆಲ್ಲಾ?’ ಎಂದು ತಮಾಷೆ ಮಾಡ್ದೋರು ಯಾರು ಅಂತ ನೋಡಿದ್ರೆ ನಂಜ ಹಲ್ಲು ಗಿಂಜಿಕೊಂಡು ಜಗಲಿ ಮೇಲಿನ ಕಂಭಕ್ಕೊರಗಿಕೊಂಡು ಕುಂತಿದ್ದ.ನಮ್ಮನೆ ಕಟ್ಟೆ ಮೇಲೆ ಮಧ್ಯಾಹ್ನ ಎರಡೂವರೆ ಎಜೆ ಬಸ್ಸು ಕಾಯೋ ಗಡಿಬಿಡಿಲಿದ್ದ ಮೇಷ್ಟ್ರು ಗಂಭೀರರಾಗೇ ಇನ್ನೂ ಕನ್ನಡಪ್ರಭದೊಳಗೆ ತಮ್ಮ ಮುಖವನ್ನು ಹೂತುಕೊಂಡಿರೋದು ಎಲೆಕ್ಷನ್ನಿನ್ನಲ್ಲಿ ಸೋತ ಗೌಡರ ಬಳಗ

ಮಾದೇಶ್ವರಗೆ ಶರಣು ಮಾದೇಶ್ವರ...

”ಹರಿ ಹಯ್ದನೆಂಬೋನು ಮಾದೇಶ್ವರಮಾದೇಶ್ವರಗೆ ಶರಣು ಮಾದೇಶ್ವರ..."ಎಂಬ ಆರ್ತನಾದ ಹಾಡಿನ ರೂಪದಲ್ಲಿ ನಮ್ಮನೆ ಮುಂದಿನ ಜಗುಲಿ ಮೇಲೆ ಕೇಳಿಬರುತ್ತಿದ್ದುದು ನೋಡಿ ಯಾರೋ ಭಿಕ್ಷುಕರು ಬಂದಿರಬೇಕೆಂದುಕೊಂಡು ಮುಂಬಾಗಿಲು ತೆಗೆದು ನೋಡಿದರೆ ನನ್ನ ಆಶ್ಚರ್ಯಕ್ಕೆ ನಂಜ ಮಧ್ಯದ ಕಂಬಕ್ಕೆ ಒರಗಿಕೊಂಡು ತನ್ನ ಪಾಡಿಗೆ ತಾನು ಹಾಡಿಕೊಳ್ಳುತ್ತಿದ್ದ. ಸ್ವಲ್ಪ ದೂರದಲ್ಲಿ ಕೊಟ್ಟಿಗೆಯಲ್ಲಿ ಕಸ ಹೊಡೆಯುತ್ತಿದ್ದ ತಿಮ್ಮಕ್ಕ ತನಗೇನೂ ಆಗೇ ಇಲ್ಲವೆನ್ನುವಂತೆ ತನ್ನ ಪಾಡಿಗೆ ತಾನಿದ್ದರೆ ಮತ್ತೊಂದು ಕಡೆ ಕೋಡೀಹಳ್ಳಿ

ಕುಂತೀ ಮಕ್ಕಳಿಗೆ ಎಂದಾರ ಅಧಿಕಾರ ಸಿಕ್ಕತೇನು?

’ಏನ್ ಸಾರ್, ಅಪರೂಪವಾಗೋಯ್ತು ನಿಮ್ಮ ದರುಶನಾ ಇತ್ತೀಚೆಗೆ?’ ಎಂದು ಪ್ರಶ್ನೆ ಕೇಳಿದ್ದು ನಮ್ಮ ಕೋಡೀಹಳ್ಳಿ ಮೇಷ್ಟ್ರುನ್ನ ಕುರಿತೇ. ಒಂದು ಟೈರ್‌ನಲ್ಲಿ ಕಡಿಮೇ ಗಾಳಿ ಇದ್ದೂ ಭರ್ತಿ ಜನರನ್ನು ತುಂಬಿಕೊಂಡ ಲಕ್ಷ್ಮೀ ಬಸ್ಸಿನಂತೆ ಉಸಿರೆಳುದುಕೊಂಡು ನಮ್ಮನೇ ಜಗುಲಿ ಮೆಟ್ಟಿಲನ್ನು ಹತ್ತುತ್ತಿದ್ದ ಮೇಷ್ಟ್ರು ಮುಖದಲ್ಲಿ ಅದ್ಯಾವ ನಗುವೂ ಇರಲಿಲ್ಲ ಅದರ ಬದಲಿಗೆ ದೇವೇಗೌಡರ ಮುಖದ ಅದಮ್ಯ ಶಾಂತಿಯ ಕಳೆ ಇದ್ದ ಹಾಗೆ ಕಂಡು ಬಂತು.’ಏನಿಲ್ಲ, ಸ್ವಲ್ಪ ಊರ್ ಕಡಿ ಕೆಲ್ಸಿತ್ತು ಹಂಗಾಗಿ ಬರಲಿಲ್ಲ ನೋಡ್ರಿ, ಮತ್ತೆ

ಆ ವಯ್ಯಾ ಒಂಥರಾ ಸುಟ್ಟಬದನೇ ಕಾಯಿ ಇದ್ದ ಹಾಗೆ...

ಮೇಷ್ಟ್ರು, ತಿಮ್ಮಕ್ಕ, ನಂಜ ಹಾಗೂ ನಾನು ಎಲ್ಲರೂ ಛಳಿಗಾಲದ ರಜೆಗೆ ಗೂಡು ಸೇರಿಕೊಂಡಿದ್ದೇವೆ - ಯಡಿಯೂರಪ್ಪ, ಪಾಪ ಒಂದೇ ವಾರ ಖುರ್ಚಿ ಮೇಲೆ ಕೂತಿದ್ರು ಅಂತ ತಿಮ್ಮಕ್ಕ ಒಂದೇ ಒಂದು ಕಣ್ಣಿನಿಂದ ಅತ್ತಂತೆ ಮಾಡಿದಳು ಎನ್ನುವುದನ್ನು ಬಿಟ್ಟರೆ ಉಳಿದ ನಾವ್ಯಾರು ಅಷ್ಟೊಂದು ತಲೆಕೆಡಿಸಿಕೊಂಡಂತಿಲ್ಲ.ಮುಂದಿನ ವರ್ಷ ಬರೋ ಚುನಾವಣೆ ಹೊತ್ತಿಗೆಲ್ಲಾ ಛಳಿ ಕಳೆದುಕೊಂಡ ಕರಡೀ ಹಾಗೆ ನಾವೆಲ್ಲ ಮತ್ತೆ ಬರ್ತೀವಿ ನಮ್ಮ ನಮ್ಮ ವರಸೆಗಳನ್ನ ಬಳಸಿಕೊಂಡು ಮಾತನಾಡಲಿಕ್ಕೆ. ಈ ರಾಜ್ಯಪಾಲ ರಾಮೇಶ್ವರ ಠಾಕೂರ್ ಬಗ್ಗೆ ಏನ್

Badge

Loading…

RSS

ಮಹಾತ್ಮಾ ಗಾಂಧಿ ಮತ್ತು ಮಾ ಬ್ಲಾ ಪೆನ್ನು

"ನನ್ನ ಜೀವನವೇ ನನ್ನ ಸಂದೇಶ" ಎಂದು ಮಹಾತ್ಮಾ ಗಾಂಧಿ ಹೇಳಿದ್ದು ಯಾವಗ ಅನ್ನುವುದನ್ನು ನಾವೆಲ್ಲರೂ ಮರೆತಿದ್ದರೂ ಅದನ್ನು ಆಗಾಗ ಪ್ರಯೋಗಿಸುವುದನ್ನು ಮಾತ್ರ ಮರೆಯುವುದಿಲ್ಲ. ಆದರೆ ಮಹಾತ್ಮ ಕೊಟ್ಟ ಸಂದೇಶವೇನು ಅದನ್ನು ನಾವು ಅರ್ಥೈಸುವುದು ಹೇಗೆ ಅನ್ನುವುದು ಮಾತ್ರ ಗಹನ ಚರ್ಚೆಯ ವಿಷಯವಾಗಬಹುದು. ಮಾಹಾತ್ಮ ಗಾಂಧಿಯನ್ನು ಓದಿಕೊಂಡಿದ್ದರೂ ಆತನ ಬಗ್ಗೆ ಪಾಂಡಿತ್ಯವಿಲ್ಲದ, ಯಾವ ಗಾಂಧೀವಾದದ ವಿಚರವನ್ನೂ ಪಾಲಿಸದ ನಾನು ಈ ವಿಷಯದಲ್ಲಿ ಹಠಾತ್ ಆಸಕ್ತಿ ಪಡೆಯುವುದಕ್ಕೆ ಕಾರಣವಿದೆ. ಈಚೆಗೆ ಪತ್ರಿಕೆಗಳಲ್ಲಿ ಮತ್ತು ನಗರದ ಹಲವೆಡೆ ಪೋಸ್ಟರುಗಳಲ್ಲಿ ಕಂಡ ಮಾ ಬ್ಲಾ [Mont Blanc] ಪೆನ್ನಿನ ಜಾಹೀರಾತನ್ನು ಕಂಡಾಗ ಈ ಪ್ರಶ್ನೆ ಸಹಜವಾಗಿ ನನ್ನಲ್ಲಿ ಉದ್ಭವವಾಯಿತು.





ಕನಸುಗಾರ ಯೂನಸ್ ಮತ್ತು ಲಾಭವಿಲ್ಲದ ವ್ಯಾಪಾರ

ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ತಮ್ಮ ಗ್ರಾಮೀಣ್ ಬ್ಯಾಂಕಿನ ಚಿಕ್ಕ ಸಾಲದ ಕಾರ್ಯಕ್ರಮದ ಮೂಲಕ ಖ್ಯಾತಿಯನ್ನು ಪಡೆದವರು. ಬಾಂಗ್ಲಾದೇಶದಂತಹ ಪುಟ್ಟ ದೇಶದಲ್ಲಿ ಬಡವರಿಗೆ ಅದರಲ್ಲೂ ಮುಖ್ಯವಾಗಿ ಹೆಂಗಸರಿಗೆ ವಿತ್ತೀಯ ಸೇವೆಗಳನ್ನೊದಗಿಸಿದ್ದೇ ಅಲ್ಲದೇ ಬ್ಯಾಂಕಿಂಗ್ ನಡೆಸಬಹುದಾದ ರೀತಿಯನ್ನೇ ಮೂಲಭೂತವಾಗಿ ಪ್ರಶ್ನಿಸಿ ಅದಕ್ಕೆ ಒಂದು ವಿಭಿನ್ನ ರೂಪವನ್ನು ಕೊಟ್ಟವರು.




ಭೂಗತ ಜಗತ್ತಿನ ಒಳನೋಟಗಳು

ಸುಧೀರ್ ವೆಂಕಟೇಶ್ ಅವರ ಗ್ಯಾಂಗ್ ಲೀಡರ್ ಫರ್ ಎ ಡೇ ಒಂದು ಕುತೂಹಲಕಾರಿ ಪುಸ್ತಕ. ನಿಜಕ್ಕೂ ಈ ಪುಸ್ತಕ ಗಂಭೀರ ಬರವಣಿಗೆ ಮತ್ತು ಜನಪ್ರಿಯ ಬರವಣಿಗೆಯ ಮಧ್ಯೆ ತೂರಾಡುತ್ತಾ, ಕಡೆಗೆ ಅನೇಕ ಪ್ರಶ್ನೆಗಳನ್ನು ಎಬ್ಬಿಸಿ ಅವುಗಳನ್ನು ಉತ್ತರಿಸಲು ಪ್ರಯತ್ನಿಸದೆಯೇ ನಿಂತುಬಿಡುತ್ತದೆ. ಹೀಗೆ ಎಲ್ಲಕ್ಕೂ ಉತ್ತರವನ್ನು ನೀಡುವುದು ಸುಧೀರ್ ಅವರ ಉದ್ದೇಶವೂ ಅಲ್ಲ, ಅದು ಸಾಧ್ಯವೂ ಆಗುವುದಿಲ್ಲ ಎನ್ನುವ ಭಾವನೆ ನಮಗೆ ಬರುವುದರಲ್ಲಿ ಯಾವ ಸೋಜಿಗವೂ ಇಲ್ಲ. ಆದರೂ ಈ ಪುಸ್ತಕವನ್ನು ನಾವು ಓದಿ ಚರ್ಚಿಸಬೇಕಾದ ಅವಶ್ಯಕತೆಯಿದೆ.





ತಿರುಮಲೇಶರ ಕಾವ್ಯ

ಕನ್ನಡದಲ್ಲಿ ಕಾವ್ಯದಲ್ಲಿ ನನಗೆ ಪ್ರಿಯರಾದ ಕವಿ ತಿರುಮಲೇಶ. ಅದಕ್ಕೆ ಕಾರಣವಿಷ್ಟೇ - ತಿರುಮಲೇಶ ಯಾವಾಗಲೂ ಏನಾದರೂ ಹೊಸತನ್ನು ಹೇಳುತ್ತಾರೆ, ಹೊಸರೀತಿಯಲ್ಲಿ ಹೇಳುತ್ತಾರೆ. ’ಮುಖವಾಡಗಳು’ ಸಂಕಲನದಿಂದ ’ಅವಧ’ದ ವರೆಗೆ ಬಂದಿರುವ ಅವರ ಐದು ಕವನ ಸಂಗ್ರಹಗಳಲ್ಲಿ ವಿಶೇಷ ವೈವಿಧ್ಯತೆಯಿದೆ. ಅಡಿಗರ ಜಾಡಿನಲ್ಲಿಯೇ ಕವಿತೆಗಳನ್ನು ಬರೆಯಲು ಪ್ರಾರಂಭಿಸಿದ ತಿರುಮಲೇಶರು ನಂತರ ತಮ್ಮದೇ ಪ್ರತ್ಯೇಕತೆಯನ್ನು ಶೋಧಿಸುತ್ತಾ ತಮ್ಮದೇ ಮಾರ್ಗವನ್ನು ಕಂಡುಕೊಂಡು ಮುಂದೆ ಸಾಗಿದರು.




ರುದ್ರಮಾತಾದ ರಾಮಜೀಭಾಯಿ

ನಾನು ಕೆಲಸ ಮಾಡುವ ಸಂಸ್ಥೆಯಲ್ಲಿ ಯಾವಾಗಲೂ ಕೇಳಿಬರುವ ಮಾತುಗಳು ವ್ಯಾಪಾರ, ವ್ಯಾಪಾರದ ಬೆಳವಣಿಗೆ, ಲಾಭಾಂಶ, ಗುರಿ-ಸಾಧನೆಗಳಿಗೆ ಸಂಬಂಧಿಸಿದ್ದು. ನಮ್ಮ ವಿದ್ಯಾರ್ಥಿಗಳೂ ಸಹ ಕಾರ್ಯಕ್ಷೇತ್ರದ ಧ್ಯೇಯ, ಅದನ್ನು ಆರ್ಜಿಸಲು ನಡೆಸಬೇಕಾದ ತಯಾರಿ, ಹಾಗೂ ಯಶಸ್ವೀ ವ್ಯಪಾರವನ್ನು ಸಮರ್ಥವಾಗಿ ನಡೆಸುವ ಮಾತನ್ನು ಆಡುತ್ತಿರುತ್ತಾರೆ. ಹೀಗಾಗಿ ಯಾವುದೇ ವಿಚಾರವನ್ನೋ-ವ್ಯಾಪಾರವನ್ನೋ ಪರಿಗಣಿಸುವಾಗ ಅದರ ಭವಿಷ್ಯವೇನು ಆ ವ್ಯಾಪಾರದಿಂದ ಬರುವ ಲಾಭಾಂಶವೇನು - ಹಾಗೂ ಅದನ್ನು ಸಾಧಿಸಲು ಹಾಕಿಕೊಳ್ಳಬೇಕಾದ ಯೋಜನೆಗಳೇನು ಎನ್ನುವ ವಿಚಾರಗಳನ್ನು ಮಥಿಸುತ್ತಲೇ ಇರುತ್ತೇವೆ. ಹೆಚ್ಚು ಕೆಲಸಕ್ಕೆ ಹೆಚ್ಚು ಹಣ - ಸಮರ್ಥ ಕೆಲಸಕ್ಕೆ ಕೊಡಬೇಕಾದ ಪ್ರೋತ್ಸಾಹ ಹೀಗೆಲ್ಲಾ ಮ್ಯಾನೇಜ್ಮೆಂಟಿನ ಥಿಯರಿಗಳನ್ನು ಒಗೆಯುತ್ತಿರುವ ವ್ಯಾಪಾರದ ಮಕ್ಕಾದಿಂದ ರುದ್ರಮಾತಾ ಅನ್ನುವ ಪುಟ್ಟ ಹೋಬಳಿಗೆ ಹೋದರೆ ಕಾಣಬಹುದಾದ ಸತ್ಯವೇ ಬೇರೆ ರೀತಿಯದ್ದು!




 

© 2009   Created by KARNATAKA KANNADA on Ning.   Create Your Own Social Network

Badges  |  Report an Issue  |  Privacy  |  Terms of Service